ಬೆಳಗಾವಿ ವಿಭಜಿಸಿ ಚಿಕ್ಕೋಡಿ ಸೇರಿ 2-3 ಹೊಸ ಜಿಲ್ಲೆ ಘೋಷಣೆ ಮಾಡಿ
Divide Belgaum and declare 2-3 new districts
ಬೆಳಗಾವಿ 12: ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಅದರಲ್ಲಿ ಚಿಕ್ಕೋಡಿ ಸೇರಿದಂತೆ 2-ರಿಂದ 3 ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವಂತೆ ಚಿಕ್ಕೋಡಿ ಕ್ಷೇತ್ರದ ಗಣೇಶ ಹುಕ್ಕೇರಿ ವಿಧಾನ ಸಭೆಯಲ್ಲಿ ಶುಕ್ರವಾರ ಪ್ರಸ್ತಾಪಿಸಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಮಧ್ಯಾಹ್ನ ವಿಧಾನ ಸಭೆಯ ಕಲಾಪದಲ್ಲಿ ಉತ್ತರ ಕರ್ನಾಟಕದ ಅಭಿವೃದ್ದಿಯ ವಿಶೇಷ ಚರ್ಚೆಯಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕೋಡಿಯನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಜಿಲ್ಲೆಯ ಸಂಸದರ ಹಾಗೂ ಶಾಸಕರ ಮತ್ತು ಮಾಜಿ ಶಾಸಕರ ಸಭೆ ಕರೆದು ಈ ಕುರಿತು ಚರ್ಚೆ ನಡೆಸಿ, ಬಳಿಕ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಚಿಕ್ಕೋಡಿ ಸೇರಿದಂತೆ 2-ರಿಂದ 3 ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು.
ಅಲ್ಲದೆ ಬೆಳಗಾವಿ ಭಾಗದಲ್ಲಿ ಕೈಗಾರಿಕೆಗಳನ್ನು ಹೆಚ್ಚಿಸುವ ಮೂಲಕ ಇಲ್ಲಿರುವ ಕೈಗಾರಿಕೆಗಳಿಗೆ ಮೂಲಭೂತ ಸೌಕರ್ಯ ನೀಡಿ, ಇಲ್ಲಿರುವ ಕೈಗಾರಿಕೆಗಳು ಕೊಲ್ಲಾಪೂರ ಪುಣೆ ಕಡೆಗೆ ಹೋಗದಂತೆ ನೋಡಿಕೊಳ್ಳುವಂತೆ ಒತ್ತಾಯಿಸಿದರು. ಇದರ ಜೊತೆಗೆ ಜೈನ್ ಸಮುದಾಯದ ನಿಗಮ ಮಂಡಳಿ ಸ್ಥಾಪನೆ ಮಾಡುವ ಮೂಲಕ ಅವರಿಗೂ ಅಲ್ಪಸಂಖ್ಯಾತರ ರೀತಿ ಸೌಕರ್ಯ ನೀಡುವಂತೆ ಒತ್ತಾಯಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 