ವೈದ್ಯರು ವೃತ್ತಿ ಧರ್ಮ ಪಾಲನೆಯೊಂದಿಗೆ ಸೇವೆ ಸಲ್ಲಿಸಬೇಕು: ಡಾ. ಎಂ.ಎಂ. ಅನಂತರಡ್ಡಿ
Doctors must serve while upholding professional ethics: Dr. M.M. Ananthareddy
ರಾಣೆಬೆನ್ನೂರು 4: ವೈದ್ಯಕೀಯ ವೃತ್ತಿಗೆ ಭಾರತೀಯ ಸಂಸ್ಕೃತಿಯಲ್ಲಿ ಅತ್ಯುನ್ನತ ಗೌರವವಿದ್ದು, ಅನಾರೋಗ್ಯದಿಂದ ಬಳಲುವವರಿಗೆ ಸೂಕ್ತ ಚಿಕಿತ್ಸೆ ನೀಡಿ ಪುನರ್ಜೀವನ ನೀಡುವ ವೈದ್ಯರು ನಿಜವಾದ ದೇವರುಗಳೆಂದು ಹಿರಿಯ ವೈದ್ಯ ಡಾ. ಎಂ.ಎಂ. ಅನಂತರಡ್ಡಿ ಹೇಳಿದರು. ನಗರದ ಹೊರವಲಯದ ಹುಣಸಿಕಟ್ಟಿ ರಸ್ತೆಯ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು.
ವೈದ್ಯರು ವೃತ್ತಿಯ ಪಾವಿತ್ರ್ಯ ಹಾಗೂ ಸೇವಾ ಮನೋಭಾವವನ್ನು ಕಾಪಾಡಿಕೊಳ್ಳಬೇಕು. ಇಂದಿನ ಯುವ ವೈದ್ಯರು ವೈದ್ಯಕೀಯ ವೃತ್ತಿಯ ಮೌಲ್ಯಗಳು ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಹಿರಿಯ ವೈದ್ಯ ಹಾಗೂ ಆಡಳಿತ ನಿರ್ದೇಶಕ ಡಾ. ಬಿ.ಆರ್. ಸಾವೂಕಾರ ಮಾತನಾಡಿ, ವೈದ್ಯರು ರೋಗಿಗಳ ಆರೋಗ್ಯ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರೀಶೀಲಿಸಿ, ಸೂಕ್ತ ಚಿಕಿತ್ಸೆ ನೀಡುವುದರ ಜೊತೆಗೆ ಆರೋಗ್ಯದ ಕುರಿತು ಸಮರ್ಕ ಮಾಹಿತಿ ಮತ್ತು ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಶಾಲೆಯ ಹಳೆಯ ವಿದ್ಯಾರ್ಥಿನಿ ಆರಾಧನಾ ಚಿನ್ನಿಕಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಗುರಿ ಸಾಧನೆಗೆ ಏಕಾಗ್ರತೆ ಮತ್ತು ಶಿಸ್ತು ಬೆಳೆಸಿಕೊಳ್ಳಬೇಕು. ಮೊಬೈಲ್ ಬಳಕೆಗೆ ಅತಿಯಾದ ಆಸಕ್ತಿ ತೋರದೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರವನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ವಜ್ರೇಶ್ವರಿ ವಿ. ಲದ್ವಾ, ಕಾರ್ಯದರ್ಶಿ ತುಳಜಪ್ಪ ವಿ. ಲದ್ವಾ, ಪ್ರಾಚಾರ್ಯರು, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ 