ವೈದ್ಯರು ಬಿರುಗಾಳಿಯ ಮದ್ಯದಲ್ಲಿ ನಿಂತಿರುತ್ತಾರೆ: ಡಾ. ಜೆಮಶೆಡ್
ವೈದ್ಯರು ಬಿರುಗಾಳಿಯ ಮದ್ಯದಲ್ಲಿ ನಿಂತಿರುತ್ತಾರೆ: ಡಾ. ಜೆಮಶೆಡ್
ಲೋಕದರ್ಶನ ವರದಿ
ಬೆಳಗಾವಿ, 3: ತೀವ್ರನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಬಿರುಗಾಳಿಯ ಮದ್ಯದಲ್ಲಿ ನಿಂತಿರುತ್ತಾರೆ. ಈ ಸಂದರ್ಭದಲ್ಲಿ ಹಲವು ಕಠಿಣ ಪರಿಸ್ಥಿತಿಯನ್ನು ನಿಭಾಯಿಸಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಭಯಬೀಳದೇ ಶಾಂತಿಯಿಂದ ಸವಾಲನ್ನು ಎದುರಿಸಬೇಕೆಂದು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯ ಹಿರಿಯ ತೀವ್ರನಿಗಾ ಘಟಕದ ತಜ್ಞವೈದ್ಯರಾದ ಡಾ. ಜೆಮಶೆಡ್ ಸೋನವಾಲಾ ಅವರಿಂದಿಲ್ಲಿ ವ್ಶೆದ್ಯರಿಗೆ ಕರೆ ನೀಡಿದರು.
ಬೆಳಗಾವಿಯ ಕಾಹೆರನ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯ ಮೆಡಿಸಿನ್ ವಿಭಾಗ ಹಾಗೂ ಅಸೊಸಿಯೇಶನ್ ಆಫ್ ಇಂಡಿಯಾ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ 37ನೇ ವಾಷರ್ಿಕ ಕೆಎಪಿಸಿಒಎನ್ (ಏಂಕಅಔಓ-19) ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸದಾ ರೋಗಿಯ ಸೇವೆಯಲ್ಲಿರುವ ವೈದ್ಯರು, ವೈದ್ಯಕೀಯ ಸಮಸ್ಯೆಗಳಿಗೆ ಎದೆಗುಂದಬಾರದು. ವೈದ್ಯವೃತ್ತಿಯನ್ನು ಗೌರವಿಸುತ್ತ ಸೇವೆಯನ್ನು ನೀಡಬೇಕಾಗಿದೆ. ಯುವ ವೈದ್ಯರು ಅತ್ಯಂತ ಶಾಂತವಾಗಿ ಚಿಕಿತ್ಸೆ ನೀಡುತ್ತ ಕಾರ್ಯನಿರ್ವಹಿಸಬೇಕು. ರೋಗಿ ಮತ್ತು ವೈದ್ಯರ ನಡುವಿನ ಸಂಬಂಧ ಅನೋನ್ಯವಾಗಿದ್ದರೆ ಬಹಳ ಒಳ್ಳೆಯದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕೆಎಲ್ಇ ಅಕಾಡೆಮಿ ಆಫ್ ಹೈಯರ ಎಜುಕೇಶನ್ ಆ್ಯಂಡ ರಿಸರ್ಚನ ಕ್ಯಾಂಪಸ್ ಅತ್ಯಂತ ಸುಂದರವಾಗಿದ್ದು, ಸ್ವಚ್ಚತೆಯಲ್ಲಿ ಅಗ್ರಗಣ್ಯವಾಗಿದೆ.ನುರಿತ ತಜ್ಞವೈದ್ಯರು , ಕಲಿಕಾ ಸೌಲಭ್ಯ ಉತ್ತಮಗಿರುವದು ಇಲ್ಲಿನ ವಿದ್ಯಾಥರ್ಿಗಳಿಗೆ ಸಾಕಷ್ಟು ಅನುಕೂಲ ಕಲ್ಪಿಸಿಕೊಟ್ಟಿದೆ ಎಂದು ಡಾ. ಪ್ರಭಾಕರ ಕೋರೆ ಅವರ ಕಾಳಜಿಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತರ್ದಲ್ಲಿ ಸಾಧನೆಗೈದ ಡಾ. ಜೆಮಶೆಡ್ ಸೋನವಾಲ, ಬೆಂಗಳೂರಿನ ಡಾ. ಚಿಕ್ಕಮಗಾ ಮಂಗಳೂರಿನ ಯೆನಪೋಯಾ ವೈದ್ಯಕೀಯ ಮಹಾವಿದ್ಯಾಲಯದ ಡಾ. ಅಧಿಕಾರಿ ಪ್ರಭಾ ಹಾಗೂ ಬೆಳಗಾವಿಯ ಮಧುಮೇಹ ತಜ್ಞವೈದ್ಯರಾದ ಡಾ ಎಂ ವಿ ಜಾಲಿ ಅವರನ್ನು ಸತ್ಕರಿಸಿಲಾಯಿತು.
ಕಾಹೆರನ ಕುಲಪತಿ ಡಾ. ವಿವೇಕ ಸಾವೋಜಿ ಅವರು ಮೂಚರ್ೆರೋಗದ ಪುಸ್ತಕ, ಡಾ. ವಿ ಡಿ ಪಾಟೀಲ ಅವರು ಸ್ಮರಣಿಕೆಯನ್ನು ಬಿಡುಗಡೆಗೊಳಿಸಿದರು. ಹುಬ್ಬಳ್ಳಿಯ ಡಾ. ಜಿ ಬಿ ಸತ್ತೂರ ಮಾತನಾಡಿದರು.ಸಮಾರಂಭದಲ್ಲಿ ಡಾ. ಎನ್ ಎಸ್ ಮಹಾಂತಶೆಟ್ಟಿ, ಡಾ. ಎ ಎ ಪಾಂಗಿ, ಡಾ. ನಾಗರಾಜ ಡಾ. ಸ್ವಾಮಿ, ಡಾ. ರಮೇಶ, ಡಾ. ಹೆಚ್ ಬಿ ರಾಜಶೇಖರ, ಡಾ.ಮಾಧವ ಪ್ರಭು, ಡಾ. ಆರತಿ ದರ್ಶನ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಡಾ. ವಿ ಎ ಕೋಠಿವಾಲೆ ಅವರು ಸ್ವಾಗತಿಸಿದರೆ, ಡಾ. ರೇಖಾ ಪಾಟೀಲ ವಂದಿಸಿದರು. ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ಸುಮಾರು 62 ಉಪನ್ಯಾಸಗಳು, 7 ಒರೆಶನ್, 472 ಪೇಪರ್ಸ ಪ್ರಸ್ತುತಪಡಿಸಲಾಯಿತು.ಡಾ. ವಿ ಎ ಕೋಠಿವಾಲೆ ಅವರನ್ನು 2019 & 2020ರ ಸಾಲಿನ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 