ಲಂಬಾಣಿ ಸಮುದಾಯ ’ದುಶ್ಚಟಕ್ಕೆ ಬಲಿಯಾಗಬೇಡಿ
Don't fall prey to Lambani community' evil
ಲಂಬಾಣಿ ಸಮುದಾಯ ’ದುಶ್ಚಟಕ್ಕೆ ಬಲಿಯಾಗಬೇಡಿ
ಹೂವಿನಹಡಗಲಿ 16 : ಸಂತ ಸೇವಾಲಾಲ್ ಅವರು ಲಂಬಾಣಿ ಸಮುದಾಯವನ್ನುದುಶ್ಚಟಮುಕ್ತಗೊಳಿಸುವ ಚಿಂತನೆ ಹೊಂದಿದ್ದರು. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಸಂತರಿಗೆ ಗೌರವ ತರಬೇಕು’ ಎಂದು ಶಾಸಕ ಎಲ್.ಕೃಷ್ಣನಾಯ್ಕ ಹೇಳಿದರು.ತಾಲ್ಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.’ಸತ್ಯ, ನಿಷ್ಠೆ, ಜ್ಞಾನದ ಸಂಕೇತವಾಗಿದ್ದ ಸೇವಾಲಾಲ್ ತಮ್ಮ ನಡೆ, ನುಡಿಯಿಂದ ಧಾರ್ಮಿಕ, ಸಾಂಸ್ಕೃತಿಕ ರಾಯಭಾರಿಯಾಗಿದ್ದರು. ಈ ಸಂತನನ್ನು ಜಾತಿಗೆ ಸೀಮತಗೊಳಿಸದೇ ಎಲ್ಲ ಸಮುದಾಯದವರು ಗೌರವಿಸುವಂತಾಗಬೇ-ಕು’ ಎಂದರು.ತಾ.ಪಂ. ಇಒ ಎಂ. ಉಮೇಶ, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಮುಖಂಡರಾದ ವಾರದ ಗೌಸ್ ಮೊಹಿದ್ದೀನ್, ಬಿ. ತೋಟನಾಯ್ಕ, ಎಲ್. ಸೋಮಿನಾಯ್ಕ, ಎನ್.ಶ್ರೀಧರನಾಯ್ಕ, ಡಾ.ಲಕ್ಷ್ಮಣನಾಯ್ಕ, ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ಎನ್. ಕೋಟೆಪ್ಪ, ಹಣ್ಣಿ ಶಶಿಧರ, ಸಿರಾಜ್ ಬಾವಿಹಳ್ಳಿ, ಚಂದ್ರನಾಯ್ಕ, ಮೀರಾಬಾಯಿ, ಪುಷ್ಪಾ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 