ಲಂಬಾಣಿ ಸಮುದಾಯ ’ದುಶ್ಚಟಕ್ಕೆ ಬಲಿಯಾಗಬೇಡಿ
Don't fall prey to Lambani community' evil
ಲಂಬಾಣಿ ಸಮುದಾಯ ’ದುಶ್ಚಟಕ್ಕೆ ಬಲಿಯಾಗಬೇಡಿ
ಹೂವಿನಹಡಗಲಿ 16 : ಸಂತ ಸೇವಾಲಾಲ್ ಅವರು ಲಂಬಾಣಿ ಸಮುದಾಯವನ್ನುದುಶ್ಚಟಮುಕ್ತಗೊಳಿಸುವ ಚಿಂತನೆ ಹೊಂದಿದ್ದರು. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಸಂತರಿಗೆ ಗೌರವ ತರಬೇಕು’ ಎಂದು ಶಾಸಕ ಎಲ್.ಕೃಷ್ಣನಾಯ್ಕ ಹೇಳಿದರು.ತಾಲ್ಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.’ಸತ್ಯ, ನಿಷ್ಠೆ, ಜ್ಞಾನದ ಸಂಕೇತವಾಗಿದ್ದ ಸೇವಾಲಾಲ್ ತಮ್ಮ ನಡೆ, ನುಡಿಯಿಂದ ಧಾರ್ಮಿಕ, ಸಾಂಸ್ಕೃತಿಕ ರಾಯಭಾರಿಯಾಗಿದ್ದರು. ಈ ಸಂತನನ್ನು ಜಾತಿಗೆ ಸೀಮತಗೊಳಿಸದೇ ಎಲ್ಲ ಸಮುದಾಯದವರು ಗೌರವಿಸುವಂತಾಗಬೇ-ಕು’ ಎಂದರು.ತಾ.ಪಂ. ಇಒ ಎಂ. ಉಮೇಶ, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಮುಖಂಡರಾದ ವಾರದ ಗೌಸ್ ಮೊಹಿದ್ದೀನ್, ಬಿ. ತೋಟನಾಯ್ಕ, ಎಲ್. ಸೋಮಿನಾಯ್ಕ, ಎನ್.ಶ್ರೀಧರನಾಯ್ಕ, ಡಾ.ಲಕ್ಷ್ಮಣನಾಯ್ಕ, ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ಎನ್. ಕೋಟೆಪ್ಪ, ಹಣ್ಣಿ ಶಶಿಧರ, ಸಿರಾಜ್ ಬಾವಿಹಳ್ಳಿ, ಚಂದ್ರನಾಯ್ಕ, ಮೀರಾಬಾಯಿ, ಪುಷ್ಪಾ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 