ಡಾ. ಶಿವಬಸವ ಮಹಾಸ್ವಾಮಿಗಳ 135 ನೇ ಜಯಂತಿ ಮಹೋತ್ಸವ
ಜಯಂತಿ ಮಹೋತ್ಸವ
ಡಾ. ಶಿವಬಸವ ಮಹಾಸ್ವಾಮಿಗಳ 135 ನೇ ಜಯಂತಿ ಮಹೋತ್ಸವ
ಬೆಳಗಾವಿ 25 : ನಾಡಿನ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡುವುದರ ಮೂಲಕ ಕಾಯಕಯೋಗಿ, ಮಹಾಪ್ರಸಾದಿ ಎನಿಸಿದ್ದ ನಾಗನೂರು ರುದ್ರಾಕ್ಷಿ ಮಠದ ಡಾ. ಶಿವಬಸವ ಮಹಾಸ್ವಾಮಿಗಳವರ 135 ನೇ ಜಯಂತಿ ಮಹೋತ್ಸವ ಅಂಗವಾಗಿ ನವೆಂಬರ್ 26ರಿಂದ ಡಿಸೆಂಬರ್ 4 ರ ವರೆಗೆ ಸಂಜೆ 6 ಗಂಟೆಗೆ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಆರ್ ಎನ್ ಶೆಟ್ಟಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಮಣಕವಾಡದ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳಿಂದ ಶರಣರ ಅನುಭವ ಕುರಿತು ಪ್ರವಚನ ನಡೆಯಲಿದೆ. ಮುಂದುವರೆದು ಶ್ರೀಗಳ ಜಯಂತಿ ಮಹೋತ್ಸವದ ಅಂಗವಾಗಿ ಡಿಸೆಂಬರ್ 5 ರಿಂದ ಡಿಸೆಂಬರ್ 8ರವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇಲ್ಲಿ ಕನ್ನಡ ನುಡಿಶ್ರೀ, ಸೇವಾರತ್ನ, ಆತ್ಮಸ್ವಾಸ್ಥ್ಯ ಶ್ರೀ, ಪ್ರಸಾದಶ್ರೀ ಮುಂತಾದ ಪ್ರಶಸ್ತಿಗಳನ್ನು ನಾಡಿನ ಸಾಧಕರಿಗೆ ನೀಡಲಾಗುವುದು ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 