ಡಾ. ಶಿವಬಸವ ಮಹಾಸ್ವಾಮಿಗಳ 135 ನೇ ಜಯಂತಿ ಮಹೋತ್ಸವ
ಜಯಂತಿ ಮಹೋತ್ಸವ
ಡಾ. ಶಿವಬಸವ ಮಹಾಸ್ವಾಮಿಗಳ 135 ನೇ ಜಯಂತಿ ಮಹೋತ್ಸವ
ಬೆಳಗಾವಿ 25 : ನಾಡಿನ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡುವುದರ ಮೂಲಕ ಕಾಯಕಯೋಗಿ, ಮಹಾಪ್ರಸಾದಿ ಎನಿಸಿದ್ದ ನಾಗನೂರು ರುದ್ರಾಕ್ಷಿ ಮಠದ ಡಾ. ಶಿವಬಸವ ಮಹಾಸ್ವಾಮಿಗಳವರ 135 ನೇ ಜಯಂತಿ ಮಹೋತ್ಸವ ಅಂಗವಾಗಿ ನವೆಂಬರ್ 26ರಿಂದ ಡಿಸೆಂಬರ್ 4 ರ ವರೆಗೆ ಸಂಜೆ 6 ಗಂಟೆಗೆ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಆರ್ ಎನ್ ಶೆಟ್ಟಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಮಣಕವಾಡದ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳಿಂದ ಶರಣರ ಅನುಭವ ಕುರಿತು ಪ್ರವಚನ ನಡೆಯಲಿದೆ. ಮುಂದುವರೆದು ಶ್ರೀಗಳ ಜಯಂತಿ ಮಹೋತ್ಸವದ ಅಂಗವಾಗಿ ಡಿಸೆಂಬರ್ 5 ರಿಂದ ಡಿಸೆಂಬರ್ 8ರವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇಲ್ಲಿ ಕನ್ನಡ ನುಡಿಶ್ರೀ, ಸೇವಾರತ್ನ, ಆತ್ಮಸ್ವಾಸ್ಥ್ಯ ಶ್ರೀ, ಪ್ರಸಾದಶ್ರೀ ಮುಂತಾದ ಪ್ರಶಸ್ತಿಗಳನ್ನು ನಾಡಿನ ಸಾಧಕರಿಗೆ ನೀಡಲಾಗುವುದು ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 