ಡಾ.ಬಿ.ಕೆ.ಸುಂದರ್ ಅವರಿಗೆ ರಾಘವೇಂದ್ರನುಗೃಹ ಪ್ರಶಸ್ತಿ ಪ್ರಧಾನ
Dr. B.K. Sundar to be conferred with Raghavendranugriha Award
ಬಳ್ಳಾರಿ 28 : ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಮಹೋತ್ಸವ ಹಾಗೂ 431ನೇ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆ ನಗರದ ಹೆಸರಾಂತ ವೈದ್ಯ ಡಾ.ಬಿ.ಕೆ.ಸುಂದರ್ ಅವರಿಗೆ, ಶ್ರೀರಾಘವೇಂದ್ರನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪವಿತ್ರ ಧಾರ್ಮಿಕ ಕ್ಷೇತ್ರ ಮಂತ್ರಾಲಯದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವದಲ್ಲಿ ಶ್ರೀಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು, ಬಳ್ಳಾರಿಯ ಡಾ.ಬಿ.ಕೆ.ಸುಂದರ್ ಅವರಿಗೆ, ಶ್ರೀರಾಘವೇಂದ್ರನುಗ್ರಹ ಪ್ರಶಸ್ತಿ ನೀಡಿ, ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ವಿವಿಧ ಪಂಡಿತರು, ವಿವಿಧ ಗಣ್ಯರು ಇತರರು ಉಪಸ್ಥಿತರಿದ್ದರು. ನಂತರ ಡಾ.ಬಿ.ಕೆ.ಸುಂದರ್ ಅವರು ಮಾತನಾಡಿ, ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಮಹೋತ್ಸವ ಹಾಗೂ 431ನೇ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆಯಲ್ಲಿ ವರ್ಷ ಮಠದಿಂದ ಕೊಡಲಾಗುವ ರಾಘವೇಂದ್ರನುಗ್ರಹ ಪ್ರಶಸ್ತಿಯನ್ನು ಈ ಬಾರಿ ನಮ್ಮನ್ನು ಗುರುತಿಸಿ ಮಠದ ಸ್ವಾಮಿಗಳು ಪ್ರಧಾನ ಮಾಡಿರುವುದು ಅತ್ಯಂತ ಸಂತಸ ಮೂಡಿಸಿದೆ. ಕಲಿಯುಗದ ಕಾಮಧೇನು, ಕಲ್ಪವೃಕ್ಷ ಶ್ರೀಗುರುರಾಯರು ಎಲ್ಲರಿಗೂ ಒಳಿತನ್ನು ಮಾಡಲಿ, ಸೇವೆಯನ್ನು ಮಾಡುವ ಸೌಭಾಗ್ಯ ಕಲ್ಪಿಸಲಿ ಎಂದು ಪ್ರಾರ್ಥಿಸುವೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 