ಡಾ.ಬಿ.ಕೆ.ಸುಂದರ್ ಅವರಿಗೆ ರಾಘವೇಂದ್ರನುಗೃಹ ಪ್ರಶಸ್ತಿ ಪ್ರಧಾನ
Dr. B.K. Sundar to be conferred with Raghavendranugriha Award
ಬಳ್ಳಾರಿ 28 : ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಮಹೋತ್ಸವ ಹಾಗೂ 431ನೇ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆ ನಗರದ ಹೆಸರಾಂತ ವೈದ್ಯ ಡಾ.ಬಿ.ಕೆ.ಸುಂದರ್ ಅವರಿಗೆ, ಶ್ರೀರಾಘವೇಂದ್ರನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪವಿತ್ರ ಧಾರ್ಮಿಕ ಕ್ಷೇತ್ರ ಮಂತ್ರಾಲಯದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವದಲ್ಲಿ ಶ್ರೀಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು, ಬಳ್ಳಾರಿಯ ಡಾ.ಬಿ.ಕೆ.ಸುಂದರ್ ಅವರಿಗೆ, ಶ್ರೀರಾಘವೇಂದ್ರನುಗ್ರಹ ಪ್ರಶಸ್ತಿ ನೀಡಿ, ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ವಿವಿಧ ಪಂಡಿತರು, ವಿವಿಧ ಗಣ್ಯರು ಇತರರು ಉಪಸ್ಥಿತರಿದ್ದರು. ನಂತರ ಡಾ.ಬಿ.ಕೆ.ಸುಂದರ್ ಅವರು ಮಾತನಾಡಿ, ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಮಹೋತ್ಸವ ಹಾಗೂ 431ನೇ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆಯಲ್ಲಿ ವರ್ಷ ಮಠದಿಂದ ಕೊಡಲಾಗುವ ರಾಘವೇಂದ್ರನುಗ್ರಹ ಪ್ರಶಸ್ತಿಯನ್ನು ಈ ಬಾರಿ ನಮ್ಮನ್ನು ಗುರುತಿಸಿ ಮಠದ ಸ್ವಾಮಿಗಳು ಪ್ರಧಾನ ಮಾಡಿರುವುದು ಅತ್ಯಂತ ಸಂತಸ ಮೂಡಿಸಿದೆ. ಕಲಿಯುಗದ ಕಾಮಧೇನು, ಕಲ್ಪವೃಕ್ಷ ಶ್ರೀಗುರುರಾಯರು ಎಲ್ಲರಿಗೂ ಒಳಿತನ್ನು ಮಾಡಲಿ, ಸೇವೆಯನ್ನು ಮಾಡುವ ಸೌಭಾಗ್ಯ ಕಲ್ಪಿಸಲಿ ಎಂದು ಪ್ರಾರ್ಥಿಸುವೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 