ಡಾ. ಜೆ ಪಿ ಅವರಿಗೆ ಇಂದು ಪ್ರಶಸ್ತಿ ಪ್ರದಾನ
Dr. J. P. presented with award today
ಬೆಳಗಾವಿ: ನಿವೃತ್ತ ಪ್ರಾಂಶುಪಾಲರಾದ ಡಾ. ಜೆ ಪಿ ದೊಡಮನಿ ಅವರು ಅನುವಾದ ಕ್ಷೇತ್ರದಲ್ಲಿ ಸದ್ದು ಗದ್ದಲವಿಲ್ಲದೆ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಅಕ್ಷರ ಕ್ರಾಂತಿ , ಸಾಮಾಜಿಕ ಕ್ರಾಂತಿ ಮಾಡಿದ ಅನೇಕ ಮಹಾತ್ಮರ ಜೀವನ ಚರಿತ್ರೆಯನ್ನು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿ, ನಾಡಿನಾದ್ಯಂತ ಅಪಾರ ಸಹೃದಯಿ ಓದುಗರ ಅಭಿಮಾನಿ ಬಳಗವನ್ನು ಹೊಂದಿರುವರು.ಇವರ ಅನುವಾದ ಕೃತಿಗಳಿಗೆ ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಒಲಿದು ಬಂದು ಅವರ ಗೌರವವನ್ನು ಹೆಚ್ಚಿಸಿವೆ. ಅವರ ಅನುವಾದ ಕೃತಿಗಳಲ್ಲಿ ಒಂದಾದ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಜೀವನ ಚರಿತ್ರೆ ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದ ಶ್ರೇಷ್ಠ ಅನುವಾದಿತ ಕೃತಿ ಎಂದು ಆಯ್ಕೆ ಮಾಡಿದೆ.
ಇಂದು ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ ಗುಬ್ಬಿ ಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು ಇಪ್ಪತೈದು ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅವರ ಈ ಪರಿಶ್ರಮ, ಸಾಧನೆಗೆ ಕುಟುಂಬದವರು ಹಾಗೂ ಅನೇಕ ಸಂಘ ಸಂಸ್ಥೆಗಳು, ಅಭಿಮಾನಿ ಬಳಗ ಅಭಿನಂದಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 