ಡಾ. ಜೆ ಪಿ ಅವರಿಗೆ ಇಂದು ಪ್ರಶಸ್ತಿ ಪ್ರದಾನ
Dr. J. P. presented with award today
ಬೆಳಗಾವಿ: ನಿವೃತ್ತ ಪ್ರಾಂಶುಪಾಲರಾದ ಡಾ. ಜೆ ಪಿ ದೊಡಮನಿ ಅವರು ಅನುವಾದ ಕ್ಷೇತ್ರದಲ್ಲಿ ಸದ್ದು ಗದ್ದಲವಿಲ್ಲದೆ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಅಕ್ಷರ ಕ್ರಾಂತಿ , ಸಾಮಾಜಿಕ ಕ್ರಾಂತಿ ಮಾಡಿದ ಅನೇಕ ಮಹಾತ್ಮರ ಜೀವನ ಚರಿತ್ರೆಯನ್ನು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿ, ನಾಡಿನಾದ್ಯಂತ ಅಪಾರ ಸಹೃದಯಿ ಓದುಗರ ಅಭಿಮಾನಿ ಬಳಗವನ್ನು ಹೊಂದಿರುವರು.ಇವರ ಅನುವಾದ ಕೃತಿಗಳಿಗೆ ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಒಲಿದು ಬಂದು ಅವರ ಗೌರವವನ್ನು ಹೆಚ್ಚಿಸಿವೆ. ಅವರ ಅನುವಾದ ಕೃತಿಗಳಲ್ಲಿ ಒಂದಾದ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಜೀವನ ಚರಿತ್ರೆ ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದ ಶ್ರೇಷ್ಠ ಅನುವಾದಿತ ಕೃತಿ ಎಂದು ಆಯ್ಕೆ ಮಾಡಿದೆ.
ಇಂದು ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ ಗುಬ್ಬಿ ಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು ಇಪ್ಪತೈದು ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅವರ ಈ ಪರಿಶ್ರಮ, ಸಾಧನೆಗೆ ಕುಟುಂಬದವರು ಹಾಗೂ ಅನೇಕ ಸಂಘ ಸಂಸ್ಥೆಗಳು, ಅಭಿಮಾನಿ ಬಳಗ ಅಭಿನಂದಿಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 