ಡಾ. ಕೆ. ರವೀಂದ್ರನಾಥ ಅವರಿಗೆ ಹಂಡೆಸಿರಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
Dr. K. Handesiri National Award to Rabindranath
ಡಾ. ಕೆ. ರವೀಂದ್ರನಾಥ ಅವರಿಗೆ ಹಂಡೆಸಿರಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹಂಪಿ 27: ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರು ಮತ್ತು ನಾಡಿನ ಹಸ್ತಪ್ರತಿ ಕ್ಷೇತ್ರದ ಹಿರಿಯ ಸಂಶೋಧಕರಾದ ಡಾ. ಕೆ. ರವೀಂದ್ರನಾಥ ಅವರಿಗೆ ಕಲಬುರ್ಗಿಯ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ 2025ನೇ ಸಾಲಿನ “ಹಂಡೆಸಿರಿ” ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಡಾ. ಕೆ. ರವೀಂದ್ರನಾಥ ಅವರು ಹಸ್ತಪ್ರತಿಯ ಗ್ರಂಥ ಸಂಪಾದನೆ, ಚರಿತ್ರೆ-ದಾಖಲು ಸಾಹಿತ್ಯ, ವಚನ ಸಾಹಿತ್ಯ ಹಸ್ತಪ್ರತಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದಾರೆ.
ಡಾ. ಕೆ. ರವೀಂದ್ರನಾಥ ಅವರ ಸೇವೆಯನ್ನು ಗುರುತಿಸಿ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠವು 2025ನೇ ಸಾಲಿನ “ಹಂಡೆಸಿರಿ” ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆಂದು ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಎಸ್. ಸಿ. ಪಾಟೀಲ್ ಅವರು ತಿಳಿಸಿದ್ದಾರೆ. ಈ ಪ್ರಶಸ್ತಿವು ಫಲಕದೊಂದಿಗೆ ಸೇರಿದಂತೆ 25 ಸಾವಿರ ನಗದು ಒಳಗೊಂಡಿದೆ. ಕೂಡಲಸಂಗಮದಲ್ಲಿ ದಿನಾಂಕ 01 ಮತ್ತು 02 ಫೆಬ್ರವರಿಯಲ್ಲಿ ನಡೆಯುವ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದ 3ನೆಯ ಸಮಾವೇಶದಲ್ಲಿ ಹಂಡೆಸಿರಿ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 