ಡಾ. ಕುಸಾಲ ದಾಸಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ-2026
Dr. Kusala Das to receive Dr. D. K. Agarwala Oration Award-2026
ವಿಜಯಪುರ 11: ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರವಿಭಾಗದ ಡಿಸ್ಟಿಂಗ್ವಿಷ್ ಚೇರ್ ಪರ್ಸನ್ ಡಾ. ಕುಸಾಲ ದಾಸ ಅವರಿಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ-2026 ಲಭಿಸಿದೆ.
ಫೆಬ್ರವರಿ 5 ರಂದು ಗುರುವಾರ ನವದೆಹಲಿಯ ಜಾಮೀಯಾ ಹಮದರ್ದ್ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಹೃದಯ ರಕ್ತನಾಳ ವಿಜ್ಞಾನ ಅಕಾಡೆಮಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸರ್ಬಿಯಾದ ಕರಗುಜೆವಿಕ್ ವಿವಿಯ ಶರೀರಕ್ರಿಯಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಯುರೋಪ ಅಕಾಡೆಮಿಯ ಆಫ್ ಕಾರ್ಡಿಯಾಲಜಿ ವಿಭಾಗದ ಅಧ್ಯಕ್ಷ ಡಾ. ವ್ಲಾದಿಮಿರ ಜಾಕೊಜೆವಿಕ್ ಪ್ರಶಸ್ತಿ ಪ್ರಧಾನ ಮಾಡಿದರು.
ಡಾ. ಕುಸಾಲ ದಾಸ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ. ಎಂ. ಪಾಟೀಲ, ಹಂಗಾಮಿ ಕುಲಪತಿ ಡಾ. ಅರುಣ ಸಿ. ಇನಾಮದಾರ, ರಜಿಸ್ಚ್ರಾರ ಡಾ. ಆರ್. ವಿ. ಕುಲಕರ್ಣಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 