ಡಾ. ರಾಜ್ ಭಾರತೀಯ ಸಂಸ್ಕೃತಿಯ ರಾಯಭಾರಿ
ಲೋಕದರ್ಶನವರದಿ
ಶಿಗ್ಗಾವಿ 13: ದಿ.ರಾಜ್ಕುಮಾರ್ ಭಾರತೀಯ ಸಂಸ್ಕೃತಿಯ ರಾಯಭಾರಿ. ಅವರ ಪ್ರತಿಯೊಂದು ಚಿತ್ರಗಳು ಸಮಾಜಕ್ಕೆ ಅನುಮಪ ಸಂದೇಶ ನೀಡಿವೆ ಎಂದು ಶಿಗ್ಗಾಂವ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ ಜಿ.ಹೆಳವರ ಹೇಳಿದರು.
ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್ನ ರಾಜ್ಕುಮಾರ್ ಸರ್ಕಲ್ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನ್ನಡ ಚಿತ್ರರಂಗದ ಮೆರು ನಟನ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರ ಶಿಲ್ಪಕ್ಕೆ ಹೂವಿನ ಹಾರ ಹಾಕಿ ಮಾತನಾಡಿದರು.
ಕನ್ನಡ ಚಿತ್ರರಂಗಕ್ಕೊಬ್ಬನೇ ರಾಜ್ಕುಮಾರ್. ಅವರ ಸ್ಥಾನ ತುಂಬಲು ಅವರೇ ಮತ್ತೆ ಹುಟ್ಟಿಬರಬೇಕೇ ಹೊರತು ಬೇರಾವ ನಟನಿಂದ ಆ ಸ್ಥಾನ ತುಂಬಲು ಸಾಧ್ಯವಿಲ್ಲ ಎಂದು ನುಡಿದರು.
ಆಡು ಮುಟ್ಟದ ಸೊಪ್ಪಿಲ್ಲ.
ರಾಜ್ಕುಮಾರ್ ಅಭಿನಯಿಸದ ಪಾತ್ರಗಳಿಲ್ಲ ಎಂದ ಶಿವಾನಂದ ಹೆಳವರ, ನಮ್ಮ ಸಂಸಾರ, ಸಿಪಾಯಿ ರಾಮು, ಶಂಕರ ಗುರು, ಸನಾದಿ ಅಪ್ಪಣ, ಕವಿರತ್ನ ಕಾಳಿದಾಸ, ಎರಡು ಕನಸು, ಆಪರೇಷನ್ ಡೈಮಂಡ್ ರಾಕೆಟ್ ಇತ್ಯಾದಿ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯವನ್ನು ಪ್ರೇಕ್ಷಕರು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.
ರಾಜ್ ನಮ್ಮನ್ನಗಲಿ 13 ವರ್ಷಗಳಾಗಿವೆ ಎಂಬುದು ಎಷ್ಟು ಸತ್ಯವೋ, ಅವರು ನಮ್ಮೊಂದಿಗೆಯೇ ಇದ್ದಾರೆ ಎಂಬುದಕ್ಕೆ ಕಿರು ತೆರೆಯಲ್ಲಿ ಆಗಾಗ್ಗೆ ಪ್ರಸಾರಗೊಳ್ಳುವ ಅವರ ಚಲನಚಿತ್ರಗಳು, ನಾಡಿಗೆ ಅವರು ನೀಡಿದ ಕೊಡುಗೆಗಳು ಸಾಕ್ಷಿ ಎಂದು ಹೇಳಿದರು. ಅಶ್ವಿನಿ ಪಟ್ಟಣಶೆಟ್ಟಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಅಲ್ತಾಫ ಯತ್ನಳ್ಳಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 