ಪ್ರಗತಿಪರ ಕೃಷಿಕ ಹೆಗಡೆಗೆ ಡಾ.ಎಂ.ಹೆಚ್.ಮರಿಗೌಡ ಸ್ಮಾರಕ ಪ್ರಶಸ್ತಿ
ಲೋಕದರ್ಶನ ವರದಿ
ಯಲ್ಲಾಪುರ: ತೋಟಗಾರಿಕಾ ಸಾಧನೆಗಾಗಿ ತಾಲೂಕಿನ ಕಾನಕೊಡ್ಲಿನ ಪ್ರಗತಿಪರ ಕೃಷಿಕ ಪ್ರಸಾದ ರಾಮಾ ಹೆಗಡೆಯವರಿಗೆ ಡಾ.ಎಂ.ಹೆಚ್.ಮರಿಗೌಡ ಸ್ಮಾರಕ ಪ್ರಶಸ್ತಿ ಲಭಿಸಿದೆ.
ಕಾಳು ಮೆಣಸು ಹಾಗೂ ದಾಲ್ಚಿನ್ನಿ ಬೆಳೆ ಸಂರಕ್ಷಣೆ, ಸಂಶೋಧನೆ ಮತ್ತು ಸಾವಿರಕ್ಕೂ ಮಿಕ್ಕ ಸಸ್ಯ ತಳಿ ರಕ್ಷಣೆಯಲ್ಲಿನ ಮಹತ್ತರ ಸಾಧನೆಗಾಗಿ ಇವರು ಪ್ರಶಸ್ತಿಗೆ ಭಾಜನನರಾಗಿದ್ದಾರೆ. ಬೆಂಗಳೂರಿನ ಕೃಷಿ ವಿವಿ ವಾಷರ್ಿಕವಾಗಿ ನೀಡುವ ಈ ಪ್ರಶಸ್ತಿ 25,000 ರು. ನಗದು ಸ್ಮರಣಿಗೆ ಒಳಗೊಂಡಿದೆ. ಗುರುವಾರ ಬೆಂಗಳೂರಿನ ಕೃಷಿ ವಿವಿ ಆವಾರದಲ್ಲಿ ನಡೆದ ಕೃಷಿ ಮೇಳದ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಕೃಷಿ ಸಚಿವ ಶಿವಶಂಕರ ರೆಡ್ಡಿ ಪ್ರಸಾದ ಹೆಗಡೆಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಹೆಗಡೆಯವರು ಕಾಳುಮೆಣಸು, ಅಡಕೆ, ದಾಲ್ಚಿನ್ನಿ ಪಳಗೊಂಡು ಹಲವಾರು ತೋಟಗಾರಿಕಾ ಬೆಳೆಗಳನ್ನು ಬೆಳೆದಿದ್ದು, ಇವರ ಸಾಧನೆಯಲ್ಲಿ ತಂದೆ ರಾಮಾ ಹೆಗಡೆ, ತಾಯಿ ಸರಸ್ವತಿ ಹೆಗಡೆ ಸಹಕಾರವಿದೆ. ಪ್ರಗತಿಪರ ಕೃಷಿಕರಾಗಿರುವ ಇವರಿಗೆ ಈ ಮೊದಲು ರಾಜ್ಯ ಸಕರ್ಾರ ನೀಡುವ ಕೃಷಿ ಪಂಡಿತ ಪ್ರಶಸ್ತಿಯೂ ಲಭಿಸಿದೆ.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 