ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಶೃಂಗೇರಿ ವಿಧುಶೇಖರ ಭಾರತೀ ಮಹಾಸ್ವಾಮಿಜಿ ಭೇಟಿ
ಲೋಕದರ್ಶನ ವರದಿ
ಬೆಳಗಾವಿ, 30: ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ ಶೃಂಗೇರಿ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಜಿ ಅವರು ಭೇಟಿ ನೀಡಿದರು. ಆಸ್ಪತ್ರೆಯ ವೈದ್ಯಕೀಯ ನಿದರ್ೇಶಕರಾದ ಡಾ. ಎಂ ವಿ ಜಾಲಿ ಅವರು ಆಸ್ಪತ್ರೆಯ ಕುರಿತು ವಿವರಿಸಿದರು. ಆಶೀರ್ವದಿಸಿದರು.
ನಂತರ ಆಶೀರ್ವದಿಸಿದ ಅವರು, ಸತ್ಯ, ಪ್ರೇಮ, ನಿಸ್ವಾರ್ಥ ಸೇವೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಕೆಎಲ್ಇ ಸಂಸ್ಥೆ ಈ ಭಾಗದಲ್ಲಿ ಮಾಡಿರುವ ಕಾರ್ಯ ಜಗದಗಲಕ್ಕೂ ವಿಸ್ತರಿಸಿದೆ. ಡಾ. ಪ್ರಭಾಕರ ಕೋರೆ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಸಂಸ್ಥೆಗೆ ದಾನಿಗಳೇ ಪ್ರೇರಕರು. ವಿದ್ಯಾದಾನ ಮಾಡುವದರ ಮೂಲಕ ಸಮಾಜದಲ್ಲಿನ ಅನಿಷ್ಠತೆಯನ್ನು ಹೋಗಲಾಡಿಸುತ್ತಿದೆ. ಅದರೊಂದಿಗೆ ವೈದ್ಯಕೀಯ ಸೇವೆ ನೀಡುತ್ತಿರುವದು ಈ ಭಾಗದ ಜನರಿಗೆ ಅತ್ಯಂತ ಅನುಕೂಲವಾಗಿದೆ. ಎಂದು ಶ್ಲಾಘಿಸಿದರು.
ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಆಶೀರ್ವದಿಸಿ ಹಣ್ಣು ವಿತರಿಸಿದರು. ಈ ಸಂದರ್ಭದಲ್ಲಿ ಡಾ. ರಾಜಶೇಖರ ಸೋಮನಟ್ಟಿ, ವಿನಯ ಬೆದ್ರೆ, ರಾಜೀವ ಪಲ್ಲೇದ, ರವಿ ಸಂಕೇಶ್ವರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 