ನಾಟಕ ಜೀವನೋತ್ಸಾಹವನ್ನು ಮೂಡಿಸುತ್ತದೆ
Drama inspires life.
ನಾಟಕ ಜೀವನೋತ್ಸಾಹವನ್ನು ಮೂಡಿಸುತ್ತದೆ
ಹೂವಿನಹಡಗಲಿ 28: ಕನ್ನಡ ನಾಟಕ ಪರಂಪರೆಗೆ ರಾಜ್ಯದ ನಾಟಕ ರಚನಾಕಾರರು ಹೊಸ ಬಗೆಯ ರೂಪವನ್ನು ಕೊಟ್ಟಿದ್ದಾರೆ, ನಾಟಕವು ಜೀವನೋತ್ಸಾಹವನ್ನು ಮೂಡಿಸುವ ಕಲೆಯಾಗಿದೆ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮಾರಯ್ಯ ಎಂ ಹೇಳಿದರು. ಪಟ್ಟಣ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಕನ್ನಡ ನಾಟಕ ಸಾಹಿತ್ಯ ಪರಂಪರೆ ವಿಷಯದ ಕುರಿತು ಮಾತನಾಡಿನಾಟಕ ಅಭಿನಯ ಕಲೆಯಾದರೂ ಅದರಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ ಜತೆಗೆ ರಂಗಭೂಮಿಯತ್ತ ಯುವಕ, ಯುವತಿಯರು ಆಕರ್ಷಿತರಾಗಬೇಕಿದೆ. ಜೀವನೋತ್ಸಾಹ ಹಾಗೂ ಸಂಸ್ಕೃತಿಯನ್ನು ಬೆಸೆಯುವ ಸೊಬಗು ರಂಗಭೂಮಿಗೆ ಎಂದರು.ಪ್ರಭಾರಿ ಪ್ರಾಚಾರ್ಯ ಡಾ.ವೈ.ಚಂದ್ರಬಾಬು ಮಾತನಾಡಿ, ಇತ್ತೀಚಿನ ದಿನಗಳಲ್ಲಿನ ಯುವ ಸಮೂಹ ಮೊಬೈಲ್ಗಳ ಬಳಕೆಯಿಂದ ದೇಶಿಯ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ನಾಟಕ ನೋಡುವುದರಿಂದ ಹಾಗೂ ನಾಟಕಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ಹಾಗೂ ನೆನಪಿನ ಶಕ್ತಿ ಹೆಚ್ಚಾಗುತ್ತದೆ ಎಂದರು. ಸಹಾಯಕ ಪ್ರಾಧ್ಯಾಪಕಿ ಉಮಾದೇವಿ, ಐಕ್ಯೂಎಸಿ ಸಂಯೋಜಕಿ ಮಹಿಮಾ ಜ್ಯೋತಿ, ಸಹಾಯಕ ಪ್ರಾಧ್ಯಾಪಕರಾದ ಡಾ.ಶರಣಪ್ಪ, ಮಾಬುಸಾಬ್, ಅನ್ನದಾನಪ್ಪ, ಮಧುಸೂದನ ಕೆ, ಬಸವರಾಜ ಪಿ ಹಾಗೂ ವಿದ್ಯಾರ್ಥಿಗಳು ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 