ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ
Dramas are necessary for social transformation
ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ
ಹೂವಿನಹಡಗಲಿ 10: ನಾಟಕಗಳು ಕೇವಲ ಮನರಂಜನೆ ನೀಡುವ ರಂಗ ಕಲೆಯಾಗದೇ ಸಮಾಜದ ಅಂಕುಡೊಂಕು ತಿದ್ದುವ ಸಾಧನವಾಗಿದೆ ಎಂದು ಶಾಸಕರ ಆಪ್ತ ಸಹಾಯಕ ಅರುಣಿ ಸುರೇಶ್ ಹೇಳಿದರು. ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶ್ರೀ ಕಂಠಿ ಬಸವೇಶ್ವರ ರಥೋತ್ಸವ ಜಾತ್ರಾ ನಿಮಿತ್ತ ಸ್ಥಳೀಯ ಕಲಾವಿದರಿಂದ "ಕಲಿತ ರೈತನ ಕಣ್ಣೀರು " ಸುಂದರ ಸಾಮಾಜಿಕ ನಾಟಕ ದಲ್ಲಿ ಭಾಗವಹಿಸಿ ಮಾತನಾಡಿದ ಅವರುಹಬ್ಬ ಹರಿದಿನ, ಜಾತ್ರೆಗಳ ಸಂದರ್ಭದಲ್ಲಿ ಪೂರ್ವಕಾಲದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿನಯಿಸಿರುವ ಸಾಮಾಜಿಕ, ಪೌರಾಣಿಕ, ಐತಿಹಾಸಿಕ ನಾಟಕಗಳು ಸಮಾಜದ ಪರಿವರ್ತನೆಗೆ ಸಂದೇಶ ನೀಡುವ ಸಂವಹನವಾಗಿವೆ. ರಂಗ ಕಲೆ ಅತ್ಯಂತ ಗಟ್ಟಿ ಕಲೆಯಾಗಿದೆ. ಟಿವಿ, ಸಿನೆಮಾ, ಧಾರವಾಹಿಗಳ ಅಬ್ಬರದ ಮಧ್ಯೆಯೂ ರಂಗ ಕಲೆಯನ್ನು ಪ್ರೋತ್ಸಾಹಿಸುತ್ತಾರೆ ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅದ್ಯಕ್ಷ ವಿ.ಬಿ.ಜಗದೀಶ ಮಾತನಾಡಿ ಇಂದಿನ ಬದುಕಿನ ಒತ್ತಡದಲ್ಲಿ ನಾಟಕಗಳು ಮನೋರಂಜನೆ ನೀಡುತ್ತೇವೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದಬಿಜೆಪಿ ಮಂಡಲ ಅದ್ಯಕ್ಷ ಹಣ್ಣಿ ಶಶಿಧರ ಮಾತನಾಡಿ ನಾಟಕಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮಾಧ್ಯಮವಾಗಿದೆ ಎಂದರು. ನಾಟಕ ವ್ಯವಸ್ಥಾಪಕ ಜಿ.ವಿನಾಯಕ.ಗ್ರಾ.ಪಂ.ಮಾಜಿ ಅದ್ಯಕ್ಷ ಕಂಠಿವೀರೇಶ.ಅಂಗಡಿ ಬಸವರಾಜ. ವಿ.ಬಿ.ಮಲ್ಲಿಕೇಶ್. ಚಂದ್ರ್ಪ.ಜಿ.ಮಲ್ಲಪ್ಪ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 