ಸಿರಿಧಾನ್ಯ ಮೇಳಕ್ಕೆ ಸಿದ್ದೇಶ್ವರ ಶ್ರೀಗಳಿಂದ ಚಾಲನೆ
ಲೋಕದರ್ಶನ ವರದಿ
ವಿಜಯಪುರ 12:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಸಾವಯವ ಹಾಗೂ ಸಿರಿಧಾನ್ಯ ಮೇಳದಲ್ಲಿ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀಗಳು ಸಾನಿಧ್ಯ ವಹಿಸಿದ್ದರು.
ಇದೇ ಜನವರಿ 12 ಹಾಗೂ 13 ರಂದು ನಗರದ ಎಸ್.ಎಸ್. ಹೈಸ್ಕೂಲ್ ಆವರಣದಲ್ಲಿ ಜರುಗಿದ ಈ ಮೇಳವು ಜ.12 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳು ಸಾನಿಧ್ಯ ವಹಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ಸಿಗೊಳಿಸುವಂತೆ ಜಂಟಿ ಕೃಷಿ ನಿದರ್ೇಶಕ ಡಾ.ಶಿವಕುಮಾರ ತಿಳಿಸಿದ್ದಾರೆ.
ಸಿರಿಧಾನ್ಯ ನಡಿಗೆ : ಸಾವಯವ ಹಾಗೂ ಸಿರಿಧಾನ್ಯ ಮೇಳದ ಅಂಗವಾಗಿ ಇಂದು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಹಮ್ಮಿಕೊಂಡ ಸಿರಿಧಾನ್ಯ ನಡಿಗೆಗೆ ಮಹಾನಗರ ಪಾಲಿಕೆ ಆಯುಕ್ತ ಡಾ.ಔದ್ರಾಮ ಅವರು ಚಾಲನೆ ನೀಡಿದರು. ಸಿರಿಧಾನ್ಯ ನಡಿಗೆ ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿದರ್ೇಶಕ ಡಾ.ಶಿವಕುಮಾರ ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 