ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ
ರಾಯಬಾಗ 09: ಮತ ಕ್ಷೇತ್ರದ ಸವರ್ಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಬರುವ ದಿನಗಳಲ್ಲಿ ಎಲ್ಲ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗವುದು ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ರವಿವಾರ ತಾಲೂಕಿನ ನಸಲಾಪೂರ ಗ್ರಾಮದಲ್ಲಿ ನಸಲಾಪೂರ ದಿಂದ ಬಾವನಸೌಂದತ್ತಿ ಗ್ರಾಮದ ಅವರೆಗೆ ಲೋಕೋಪಯೋಗಿ ಇಲಾಖೆಯಡಿ ಮಂಜೂರಾದ 1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ವಿರೋಧ ಪಕ್ಷದಲ್ಲಿ ಇದ್ದರು ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ನೀರಾವರಿ ಮತ್ತು ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಸುಧಾರಣೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಡಿ.ಕೆ.ಎಸ್.ಎಸ್.ಕೆ ನಿದರ್ೇಶಕ ಭರತೇಶ ಬನವಣೆ, ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಸದಾನಂದ ಹಳಿಂಗಳಿ, ಬಾಳಾಸಾಬ ಸಮಾಜೆ, ಚೌಗೌಡ ಪಾಟೀಲ, ವಿಜಯ ಕೋಠಿವಾಲೆ, ಬಾಳಾಸಾಬ ಪಾಟೀಲ, ಸದಾಶಿವ ಘೋರ್ಪಡೆ, ಸಮೀರ ಪವಾರ ಸೇರಿದಂತೆ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 