ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಬೆಳಗಾವಿ 15: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಸುವರ್ಣ ವಿಧಾನಸೌಧದಲ್ಲಿ ಕಲಾಪಗಳು ನಡೆಯುತ್ತಿವೆ ಜೊತೆಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡುತ್ತಿದ್ದಾರೆ
ಕ್ಷೇತ್ರದ ಕರೀಕಟ್ಟಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಒಂದು ಕೋಟಿ ರೂ ಅನುದಾನದಲ್ಲಿ ಎರಡು ಕಿಮೀ ಮುಖ್ಯ ರಸ್ತೆ ಕಾಮಗಾರಿಗೆ ದಿ.14ರಂದು ಚಾಲನೆ ನೀಡಲಾಯಿತು ಕಾಮಗಾರಿಗೆ ಚಾಲನೆ ನೀಡಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಕ್ಷೇತ್ರದ ಅಭಿವೃದ್ಧಿಗೆ ಏನೇನು ಬೇಕು ಅನ್ನೋದನ್ನ ಪಟ್ಟಿ ಮಾಡಿ ಸಮಂಧಿಸಿದ ಇಲಾಖೆಗಳ ಸಚಿವರನ್ನು ಭೇಟಿಯಾಗಿ ಕಾಮಗಾರಿಗಳಿಗೆ ಮಂಜೂರಾತಿ ಪಡೆಯುವ ಪ್ರಯತ್ನ ಮುಂದುವರೆದಿದೆ ಎಂದರು
ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳನ್ನು ಆರಂಭಿಸಲಾಗಿದೆ ಇನ್ನೂ ಹಲವಾರು ರಸ್ತೆ ಕಾಮಗಾರಿಗಳ ಟೆಂಡರ್ ಕರೆಯಲಾಗಿದೆ ಕೆಲವು ಕಾಮಗಾರಿಗಳಿಗೆ ಮಂಜೂರಾತಿ ಪಡೆಯುಲಾಗುತ್ತಿದೆ ಕ್ಷೇತ್ರದಲ್ಲಿ ಕೆರೆ ತುಂಬಿಸುವ ಮಹತ್ವದ ಯೋಜನೆಯ ಸವರ್ೆ ಕಾರ್ಯ ನಡೆಯುತ್ತದೆ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪೂರ್ಣ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳು ಕಾಣಿಸಲಿವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು
ಮಹೇಶ ಸುಗೈನ್ನವರ,ನಿತೀಶ ಚಂದಗಡಕರ,ತೌಸೀಫ ಫನೀಬಂಧ,ವಿಠ್ಠಲ ಬಂಡಿಗೇರ್,ಲಗವ್ಮಣ್ಣಾ ಸುಲಧಾಳ,ಮಹಾದೇವ ಬುಡರಿ ತುಕಾರಾಮ ಕರಡಿಗುದ್ದಿ,ದುರ್ಗಪ್ಪಾ ದಾಸನಟ್ಟಿ,ಬಸಪ್ಪಾ ಸುಲಧಾಳ,ತೋಪಣ್ಣಾ ಪ್ರಜಾರಿ,ಸಂತೋಷ ಬೂಧಿಹಾಳ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 