ದುಗರ್ಾದೇವಿ ಜಾತ್ರೆಗೆ ಅದ್ದೂರಿ ಚಾಲನೆ
ಲೋಕದರ್ಶನ ವರದಿ
ಹಾವೇರಿ28: ತಾಲೂಕಿನ ಹನುಮನಹಳ್ಳಿ ಗ್ರಾಮದ ದುಗರ್ಾದೇವಿ ಜಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಶುಕ್ರವಾರ ಸಂಜೆ 8.00ಕ್ಕೆ ಅಲಂಕಾರಗೊಂಡ ವಾಹನದಲ್ಲಿ ದೇವಿಯನ್ನು ಶೃಂಗರಿಸಿಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇರವಣಿಗೆ ಮುಖಾಂತರ ಸಾಗಿ ನಂತರ ದುಗರ್ಾದೇವಿ ದೇವಸ್ಥಾನ ತಲುಪಿ ದೇವಿಯನ್ನು ಪ್ರತಿಷ್ಠಾಪಿಸಿ ಊಡಿ ತುಂಬುವ ಕಾರ್ಯಕ್ರಮ ಜರುಗಿತು.
ಮರುದಿನ ಶನಿವಾರ ದಿವಸ ಸಾಯಂಕಾಲದವರೆಗೆ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುವ ತಾಯಿಗೆ ಊರಿನ ಗ್ರಾಮಸ್ಥರು ಪೂಜಾ ಕೈಂಕರ್ಯ ಕೈಗೊಂಡು ದೇವಿಗೆ ನೈವೇದ್ಯವನ್ನು ಅಪರ್ಿಸಿದರು.
ಮನ ಸಳೆದ ಸಿಡಿಮದ್ದಿನ ಪ್ರದರ್ಶನ: ಮೇರವಣಿಗೆಯಲ್ಲಿ ತಮಷಾ ಮದ್ದಿನ ಆರ್ಭಟ ನೋಡುಗರ ಮನ ಸೆಳೆಯಿತು ಜೊತೆಗೆ ರಾಣೇಬೆನ್ನೂರಿನ ಶಾರದಾ ಆಕರ್ೆಸ್ಟ್ರಾ ಸೌಂಡ್ ಸಿಸ್ಟಮ್ ಆಯೋಜಿಸಿದ ಸಂಗೀತ ಕಾರ್ಯಕ್ರಮದ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಯುವ ಸಮೂಹ ಸಂಭ್ರಮಿಸಿತು.
ಜಾತ್ರೆಯ ಮೆರವಣಿಗೆಯಲ್ಲಿ ಗ್ರಾಮದ ಮುಖಂಡರಾದ ಶಿವನಗೌಡ ಲೆಕ್ಕನಗೌಡ್ರ, ಬಸವರಾಜ ರಿತ್ತಿ, ಕನಕಪ್ಪ ದಾಸಣ್ಣನವರ, ಸುನೀಲ್ ಬಂಕಾಪುರ, ಶ್ರೀಕಾಂತ ಹನುಮಗೌಡ್ರ ಸೇರಿದಂತೆ ಗುರು- ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 