ನಮ್ಮ ಕ್ಲಿನಿಕನಲ್ಲಿ ಸುಲಭವಾಗಿ ವೈದ್ಯಕೀಯ ಸೌಲಭ್ಯ : ಶಾಸಕ ಪಠಾಣ
Easy medical facilities at our clinic: MLA Pathana
ನಮ್ಮ ಕ್ಲಿನಿಕನಲ್ಲಿ ಸುಲಭವಾಗಿ ವೈದ್ಯಕೀಯ ಸೌಲಭ್ಯ : ಶಾಸಕ ಪಠಾಣ
ಶಿಗ್ಗಾವಿ 25 : ಬಡವರು, ದಿನಗೂಲಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೌಲಭ್ಯ ದೊರಕುವ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ಸೇವೆ ಸಲ್ಲಿಸುತ್ತದೆ ಎಂದು ಶಾಸಕ ಯಾಶೀರಖಾನ ಪಠಾಣ ಹೇಳಿದರು. ತಾಲೂಕಿನ ಗಂಗೆಬಾವಿಯ ಕೆ.ಎಸ್.ಆರ್.ಪಿ.10ನೇ ಪಡೆಯ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕೆ.ಎಸ್.ಆರ್.ಪಿ ಪಡೆಯ ಸೇವೆ ಅಪಾರವಾಗಿದೆ ಆ ನಿಟ್ಟಿನಲ್ಲಿ ಅವರ ಹಾಗೂ ಕುಟುಂಬಸ್ಥರ ಆರೋಗ್ಯವು ಕೂಡ ಮುಖ್ಯವಾಗಿದ್ದು ಅಲ್ಲದೇರೋಗಿಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಚಿಕಿತ್ಸೆ ಲಭಿಸುವ ನಿಟ್ಟಿನಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುವದು ನಮ್ಮ ಕ್ಲಿನಿಕ್ ನ ಉದ್ದೇಶವಾಗಿದೆ ಎಂದರು.
ಶಾಸಕ ಯಾಶೀರಖಾನ ಪಠಾಣರನ್ನು ಕೆ.ಎಸ್.ಅರ್.ಪಿ ಕಮಾಂಡೆಂಟ್ ಎನ್.ಬಿ.ಮೆಳ್ಳಾಗಟ್ಟಿ ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಮಾಂಡೆಂಟ್ ನಾಗನಗೌಡ ಬಿ ಮೆಳ್ಳಾಗಟ್ಟಿ, ಡೆಪೋಟಿ ಕಮಾಂಡೆಂಟ್ ಮಂಜಪ್ಪ ಕೋಟಿಹಾಳ, ತಾಲೂಕ ಆರೋಗ್ಯ ಅಧಿಕಾರಿ, ಡಾ. ಸತೀಶ್ ಎ ಆರ್, ಗುಡ್ಡಪ್ಪ ಜಲದಿ,ಅಣ್ಣಪ್ಪ ಲಮಾಣಿ, ಶಂಭುಲಿಂಗಪ್ಪ ಆಜೂರ, ಮಹಾಂತೇಶ ಸಾಲಿ, ಜಿಲ್ಲಾ ಸಂಯೋಜಕ ಸಂತೋಷ್ ಹೊಸಮನಿ, ಆಡಳಿತ ವೈದ್ಯಾಧಿಕಾರಿ ಡಾ. ರಂಜಿತಾ, ಡಾ. ಮಲ್ಲೇಶ ಟಿ, ಅಶೋಕ ಬಿ ಅಮಾತಣ್ಣವರ, ರಾಮನಗೌಡ ಪಾಟೀಲ, ಗುರುನಾಥ ಹಾಗಲೂರ, ಗುರವ್ವ ಸಿಸ್ಟರ್ ಸೇರಿದಂತೆ ಆಶಾ ಕಾರ್ಯಕರ್ತೆಯರು ಆರೋಗ್ಯ ಮತ್ತು ಪೋಲಿಸ ಪಡೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 