ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ, ಶಿಸ್ತು ಸಹಕಾರಿ: ಶಾಸಕ ಸಿದ್ದು ಸವದಿ
Education and discipline contribute to the all-round development of students: MLA Siddu Savadi
ಮಹಾಲಿಂಗಪುರ 22: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಮತ್ತು ಶಿಸ್ತು ಸಹಾಯಕ ಎಂದು ಶಾಸಕ ಸಿದ್ದು ಸವದಿಯವರು ಹೇಳಿದರು. ಸಮೀಪದ ಚಿಮ್ಮಡದ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಭುಲಿಂಗೇಶ್ವರ ಇಂಟರ್ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಮತ್ತು ಶಿಸ್ತು ಎರಡು ಮುಖ್ಯ. ಶಿಕ್ಷಣ ಮತ್ತು ಶಿಸ್ತು ಒಂದೇ ನಾಣ್ಯದ ಎರಡು ಮುಖಗಳು. ಎರಡು ಒಟ್ಟಿಗೆ ಸೇರಿದಾಗ ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆ ಸಾಧ್ಯ ಎಂದರು.
ಡಿಎಸ್ಪಿ ರೋಶನ್ ಜಮೀರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರಿಯ ಕಡೆಗೆ ಗಮನ ವಹಿಸಬೇಕು ಜೊತೆಗೆ ಉತ್ತಮ ಸ್ಥಾನ ಪಡೆಯಬೇಕು ಎಂದರು. ಉಪಾಧ್ಯಕ್ಷ ಬಾಬಾಗೌಡ ಪಾಟೀಲ, ಬೆಂಗಳೂರು ಬುಲ್ಸ್ ತಂಡದ ಪ್ರಮುಖ ಆಟಗಾರ ಸತ್ಯಪ್ಪ ಮಟ್ಟಿ, ಶಾಲೆಯ ಕಾರ್ಯದರ್ಶಿ ವಿದ್ಯಾಧರ ಸವದಿ ಸೇರಿದಂತೆ ಶಾಲಾ ಪ್ರಾಂಶುಪಾಲರು, ಹಿಪ್ಪೋಕ್ಯಾಂಪಸ್ ನಿರ್ದೇಶಕರು, ಶಿಕ್ಷಕ ಸಿಬ್ಬಂದಿ, ಶಾಲೆಯ ಆಡಳಿತ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 