ಪ್ರಾಥಮಿಕ ಕೃ.ಪ.ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
Election of President Vice-President of Primary K.P.Sahkar Sangh
ಪ್ರಾಥಮಿಕ ಕೃ.ಪ.ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಕಂಪ್ಲಿ 15: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಟ್ಟೆ ಸಣ್ಣ ದುರುಗಪ್ಪ ಹಾಗೂ ಉಪಾಧ್ಯಕ್ಷರಾಗಿ ಬಳೆ ಮಲ್ಲಿಕಾರ್ಜುನ ಅವಿರೋಧವಾಗಿ ಆಯ್ಕೆಯಾದರು. ಇಲ್ಲಿನ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಈ ಇಬ್ಬರನ್ನು ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ಕಟ್ಟೆ ಸಣ್ಣ ದುರುಗಪ್ಪ, ಉಪಾಧ್ಯಕ್ಷರಾಗಿ ಬಳೆ ಮಲ್ಲಿಕಾರ್ಜುನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಯರಿ್ರಸ್ವಾಮಿ ಘೋಷಿಸಿದರು.
ನೂತನ ಅಧ್ಯಕ್ಷ ಕಟ್ಟೆ ಸಣ್ಣ ದುರುಗಪ್ಪ ಮಾತನಾಡಿ, ಸಹಕಾರ ಸಂಘದ ಅಭಿವೃದ್ಧಿಯ ದೃಷ್ಟಿಯಿಂದ ನಿರ್ದೇಶಕರು ಅಧ್ಯಕ್ಷ ಸ್ಥಾನಕ್ಕೆ ನಮ್ಮನ್ನು ಆಯ್ಕೆ ಮಾಡಿದ್ದು, ಅವರ ನಿರ್ದೇಶನದಂತೆ ಅಭಿವೃದ್ಧಿಗೆ ಶ್ರಮಿಸಲಾಗುವುದು. ಮತ್ತು ರೈತರಿಗೆ ಸಮರ್ಕವಾಗಿ ರಸಗೊಬ್ಬರ ಕಲ್ಪಿಸಲಾಗುವುದು ಎಂದರು.
ಈ ಚುನಾವಣೆ ಪ್ರಕ್ರಿಯೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಈರಣ್ಣ, ನಿರ್ದೇಶಕರಾದ ಅಳ್ಳಿ ನಾಗರಾಜ, ಈರ್ಪ ಜೋಳಮಾರ, ಗಂಗಣ್ಣ ತಳವಾರ, ಎಸ್.ಸಣ್ಣಪ್ಪ, ಬಿ.ಎಂ.ವಿಶಾಲಾಕ್ಷಿ, ಕೆ.ನಾಗಮ್ಮ, ರಾಜೇಶ ಶೆರೆಗಾರ, ಟಿ.ನಿರಂಜನಯ್ಯ, ಕೆ.ಕೃಷ್ಣ, ಬಿ.ಬಸವರಾಜ ಇದ್ದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಡಾ.ವಿ.ಎಲ್.ಬಾಬು, ಮುಖಂಡರಾದ ಪಿ.ಬ್ರಹ್ಮಯ್ಯ, ಬಿ.ಸಿದ್ದಪ್ಪ, ಪಿ.ಮೂಕಯ್ಯಸ್ಚಾಮಿ, ಕರೇಕಲ್ ಮನೋಹರ, ಯು.ಹನುಮಂತ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 