ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆ
Election of office bearers of Dalit Sangharsh Samiti
ಜಮಖಂಡಿ 06: ನಗರದ ರಮಾ ನಿವಾಸ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಾಗವಾರ ಬಣದ ಜಮಖಂಡಿ ತಾಲೂಕ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶಾಮರಾವ ಘಾಟಗೆ ಮಾತನಾಡಿ, ರಾಜ್ಯದಲ್ಲಿ ಮತ್ತು ದೇಶದಲ್ಲಿ ಜಾತೀಯ ತಾರತಮ್ಯ ಹಾಗೂ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಹುಬ್ಬಳ್ಳಿ ಇನಾಂ ವೀರಾಪುರ್ ಗ್ರಾಮದ ಮರ್ಯಾದೆ ಹತ್ಯೆಯೇ ಇದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದರು.
ಜಿಲ್ಲಾ ಸಂಚಾಲಕ ಮುತ್ತಣ್ಣ ಮೇತ್ರಿ ಮಾತನಾಡಿ, ಜಿಲ್ಲೆಯಲ್ಲಿ ಸಂಘಟನೆಯನ್ನು ಅಲ್ಪಸಂಖ್ಯಾತರು ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟ ವರ್ಗದವರನ್ನು ಸೇರಿಸಿಕೊಂಡು ಸಂಘಟನೆಯನ್ನು ಬಲಿಷ್ಠ ಗೊಳಿಸುವದಾಗಿ ಎಂದರು.
ತಾಲೂಕ ಹಿಂದುಳಿದ ವರ್ಗದ ಸಂಚಾಲಕರಾಗಿ ನಾಗಪ್ಪ ಹೆಗಡೆ, ಪರಿಶಿಷ್ಟ ವರ್ಗದ ಸಂಚಾಲಕ ಪರಶುರಾಮ ನಾಟಿಕಾರ, ಸಂಚಾಲಕ ಪರಶುರಾಮ ಮಾಂಗ, ಅಲ್ಪಸಂಖ್ಯಾತರ ಘಟಕದ ಸಂಚಾಲಕ ನದೀಮ್ ಗೋಟೆವರ ಅವರನ್ನು ಆಯ್ಕೆ ಮಾಡಿದರು.
ಸಂಘಟನಾ ಸಂಚಾಲಕ ಸದಾಶಿವ ಕಾಂಬಳೆ, ಅನಿಲ ಭಜಂತ್ರಿ, ಸುನೀಲ ಘಾಟಗೆ, ಪುಂಡಲಿಕ ಮಾದರ, ರಮೇಶ ಪೂಜಾರಿ, ಖಜಾಂಚಿ ಬರಮಣ್ಣ ದಡ್ಡಿಮನಿ, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಜು ಮೇತ್ರಿ, ಯಮನಪ್ಪ ಲಿಂಗನೂರು, ಬಸು ಬುದ್ನಿ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಲಕ್ಷ್ಮಣ ಹರಿಜನ, ಚಂದ್ರು ಹರಿಜನ, ಅರುಣ ಲಗಳಿ, ಮುಬಾರಕ ಗೋಟ,ೆ ರಾಜು ಲೋಕಂಡೆ, ಸುನೀಲ ಘಾಟಗೆ ಇದ್ದರು,
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 