ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೂರು ನಾಮಪತ್ರ ಸಲ್ಲಿಕೆ ರಂಗೇರುತ್ತಿರುವ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆ
ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆ
ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೂರು ನಾಮಪತ್ರ ಸಲ್ಲಿಕೆ ರಂಗೇರುತ್ತಿರುವ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆ
ಚಿಕ್ಕೋಡಿ 27: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಡಿ.4 ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆದಿನದಂದು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರೌಢ ಶಾಲಾ ವಿಭಾಗದಿಂದ ಎಸ್.ಎಂ.ಹುಲ್ಲೋಳಿ, ಆರೋಗ್ಯ ಇಲಾಖೆಯಿಂದ ಬಿ.ಎ.ಕುಂಬಾರ, ಕಂದಾಯ ಇಲಾಖೆಯಿಂದ ಡಿ.ಎಸ್.ವಟಗುಡೆ ನಾಮಪತ್ರ ಸಲ್ಲಿಸಿದರು. ಖಜಾಂಚಿ ಸ್ಥಾನಕ್ಕೆ ರಾಜು ಚನ್ನವರ, ಎಸ್.ಎಸ್.ಬೆಳಗಾವಿ ನಾಮಪತ್ರ ಸಲ್ಲಿಸಿದರು. ರಾಜ್ಯ ಪರಿಷತ್ ಸ್ಥಾನಕ್ಕೆ ಡಾ,ಅರುಣ ಸಾಂಗ್ರೋಳೆ, ಎ.ಬಿ.ಬಸ್ತವಾಡೆ, ಎಸ್.ಎಸ್.ಹಂಪಣ್ಣವರ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಹುತೇಕ ಎರಡು ಪೆನಲ್ಗಳಾಗಿ ರಂಗೇರುವ ಸಾಧ್ಯತೆ ಹೆಚ್ಚಿದೆ. ಆರೋಗ್ಯ ಇಲಾಖೆಯ ಬಿ.ಎ.ಕುಂಬಾರ ಮತ್ತು ಎಸ್.ಎನ್.ಬೆಳಗಾವಿ ನೇತೃತ್ವದ ಒಂದು ಪೆನಲ್ ಆದರೆ ಪ್ರೌಢ ಶಾಲೆಯ ವಿಭಾಗದ ಎಸ್.ಎಂ.ಹುಲ್ಲೋಳಿ ಮತ್ತು ಕಂದಾಯ ಇಲಾಖೆಯ ಡಿ.ಎಸ್.ವಟಗುಡೆ ನೇತೃತ್ವದ ಮತ್ತೊಂದು ಪೆನಲ್ ಆಗಿರುವುದು ಸದ್ಯ ಮೇಲ್ನೋಟಕ್ಕೆ ಕಂಡು ಬಂದಿದೆ.
ಜಿಲ್ಲಾ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನದ ಆಯ್ಕೆಗೆ ಬುಧವಾರ ಕೊನೆದಿನವಾಗಿದ್ದರಿಂದ ಎರಡು ಪೆನಲ್ ಗುಂಪುಗಳು ಪ್ರತ್ಯೇಕವಾಗಿ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿರುವುದು ವಿಶೇಷವಾಗಿತ್ತು. ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಸ್.ಎಂ.ಹುಲ್ಲೋಳಿ ಮತ್ತು ಡಿ.ಎಸ್.ವಟಗುಡೆ ನಾಮಪತ್ರ ಸಲ್ಲಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 