ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೂರು ನಾಮಪತ್ರ ಸಲ್ಲಿಕೆ ರಂಗೇರುತ್ತಿರುವ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆ
ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆ
ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೂರು ನಾಮಪತ್ರ ಸಲ್ಲಿಕೆ ರಂಗೇರುತ್ತಿರುವ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆ
ಚಿಕ್ಕೋಡಿ 27: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಡಿ.4 ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆದಿನದಂದು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರೌಢ ಶಾಲಾ ವಿಭಾಗದಿಂದ ಎಸ್.ಎಂ.ಹುಲ್ಲೋಳಿ, ಆರೋಗ್ಯ ಇಲಾಖೆಯಿಂದ ಬಿ.ಎ.ಕುಂಬಾರ, ಕಂದಾಯ ಇಲಾಖೆಯಿಂದ ಡಿ.ಎಸ್.ವಟಗುಡೆ ನಾಮಪತ್ರ ಸಲ್ಲಿಸಿದರು. ಖಜಾಂಚಿ ಸ್ಥಾನಕ್ಕೆ ರಾಜು ಚನ್ನವರ, ಎಸ್.ಎಸ್.ಬೆಳಗಾವಿ ನಾಮಪತ್ರ ಸಲ್ಲಿಸಿದರು. ರಾಜ್ಯ ಪರಿಷತ್ ಸ್ಥಾನಕ್ಕೆ ಡಾ,ಅರುಣ ಸಾಂಗ್ರೋಳೆ, ಎ.ಬಿ.ಬಸ್ತವಾಡೆ, ಎಸ್.ಎಸ್.ಹಂಪಣ್ಣವರ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಹುತೇಕ ಎರಡು ಪೆನಲ್ಗಳಾಗಿ ರಂಗೇರುವ ಸಾಧ್ಯತೆ ಹೆಚ್ಚಿದೆ. ಆರೋಗ್ಯ ಇಲಾಖೆಯ ಬಿ.ಎ.ಕುಂಬಾರ ಮತ್ತು ಎಸ್.ಎನ್.ಬೆಳಗಾವಿ ನೇತೃತ್ವದ ಒಂದು ಪೆನಲ್ ಆದರೆ ಪ್ರೌಢ ಶಾಲೆಯ ವಿಭಾಗದ ಎಸ್.ಎಂ.ಹುಲ್ಲೋಳಿ ಮತ್ತು ಕಂದಾಯ ಇಲಾಖೆಯ ಡಿ.ಎಸ್.ವಟಗುಡೆ ನೇತೃತ್ವದ ಮತ್ತೊಂದು ಪೆನಲ್ ಆಗಿರುವುದು ಸದ್ಯ ಮೇಲ್ನೋಟಕ್ಕೆ ಕಂಡು ಬಂದಿದೆ.
ಜಿಲ್ಲಾ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನದ ಆಯ್ಕೆಗೆ ಬುಧವಾರ ಕೊನೆದಿನವಾಗಿದ್ದರಿಂದ ಎರಡು ಪೆನಲ್ ಗುಂಪುಗಳು ಪ್ರತ್ಯೇಕವಾಗಿ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿರುವುದು ವಿಶೇಷವಾಗಿತ್ತು. ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಸ್.ಎಂ.ಹುಲ್ಲೋಳಿ ಮತ್ತು ಡಿ.ಎಸ್.ವಟಗುಡೆ ನಾಮಪತ್ರ ಸಲ್ಲಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 