ಮಕ್ಕಳು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಕೆ.ಲೀಲಾವತಿ
ಹಾವೇರಿ25: ಮಕ್ಕಳು ರಜಾ ದಿನಗಳಲ್ಲಿ ಸಮಯ ವ್ಯರ್ಥಮಾಡದೇ ಶಿಬಿರದಲ್ಲಿ ಪಾಲ್ಗೊಂಡು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಶ್ರೀಮತಿ ಕೆ.ಲೀಲಾವತಿ ಅವರು ಹೇಳಿದರು.
ಗುರುವಾರ ನಾಗೇಂದ್ರನಮಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.8ರಲ್ಲಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯರ್ಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಜರುಗಿದ ಬೇಸಿಗೆ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ವಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ಕಾಳಜಿ ಬಗ್ಗೆ ಅರಿವು ಹೊಂದಬೇಕು. ಜೊತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಅವರು ಮಾತನಾಡಿ, ಮಕ್ಕಳಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಆಶಾಕಿರಣ ಸಂಸ್ಥೆಯ ಮುತ್ತುರಾಜ ಮಾದರ, ಗೋವಿಂದಪ್ಪ ದೊಡ್ಡಮನಿ, ಪರಮೇಶ್ವರ ಬಡಿಗೇರ, ಉಮೇಶ ಮರೋಳ, ಸಿ.ಜಿ,ಬ್ಯಾಡಗಿ, ವಾಣಿ, ಕೋತಂಬರಿ, ಬಳ್ಳಾರಿ, ಸುಧಾಬಾಯಿ, ಎಸ್.ಎಂ.ಬಡಿಗೇರ, ಮುಖ್ಯೋಪಾಧ್ಯಯ ಅಶೋಕ ಹಾವನೂರ ಉಪಸ್ಥಿತರಿದ್ದರು. ಬಿ.ಆರ್.ಸಿ. ಸಿ.ಎಸ್.ಭಗವಂತಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಶಿವಣ್ಣ ಸ್ವಾಗತಿಸಿದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 