ಪ್ರೌಢ ಶಾಲಾ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆ
Essay competition for high school students
ಬೆಳಗಾವಿ 6: ನಗರದ ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದವರು ಹುದಲಿ ಗ್ರಾಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ‘ನನ್ನ ಶಾಲಾ ದಿನಗಳು’ ಮತ್ತು ‘ನನ್ನ ಮೆಚ್ಚಿನ ಸಾಹಿತಿ’ ವಿಷಯಗಳ ಕುರಿತಂತೆ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡದ್ದರು. ಸ್ಪರ್ಧೆಯಲ್ಲಿ ಹುದಲಿಯ ಎಸ್. ಸಿ. ಮಾಳಗಿ ಪ್ರೌಢಶಾಲೆ ಮತ್ತು ಶಾರದಾ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಎನ್. ಬಿ. ದೇಶಪಾಂಡೆ ಸ್ಪರ್ಧೆಯ ನಿಯಮಗಳನ್ನು ವಿವರಿಸಿ ಈ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಹೀಗೆ ಮೂರು ಬಹುಮಾನಗಳಿದ್ದು ಅವುಗಳನ್ನು ಡಿಸೆಂಬರ್ದಲ್ಲಿ ನಡೆಯುವ ಸಾಹಿತ್ಯ ಪ್ರತಿಷ್ಠಾನದ ವಾರ್ಷಿಕೋತ್ಸವ ಸಂದರ್ಭದಲ್ಲಿ ನೀಡಲಾಗುವುದು ಎಂದು ಹೇಳಿದರು.
. ಸ್ಪರ್ಧೆಯ ಸಂಯೋಜಕ ಚಿದಂಬರ ಮುನವಳ್ಳಿಯವರು ಮಾತನಾಡುತ್ತ ಬಹುಮಾನ, ಪ್ರಶಸ್ತಿಗಳು ಸಿಗುವುದು ಅಥವಾ ಸಿಗದೇ ಇರುವುದು ಮುಖ್ಯವಲ್ಲ. ಪ್ರಯತ್ನವೆನ್ನುವುದು ಮುಖ್ಯವಾದುದು. ಪ್ರಯತ್ನ ಯಶಸ್ಸಿನ ಮೆಟ್ಟಲು ಇದ್ದಂತೆ. ನೀವೆಲ್ಲ ಪ್ರಯತ್ನವಾದಿಗಳಾಗಿ ಜೀವನದಲ್ಲಿ ಯಶಸ್ಸನ್ನು ಪಡೆಯಿರಿ ಎಂದು ಹಾರೈಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲ ಮಕ್ಕಳಿಗೂ ಪ್ರಮಾಣ ಪತ್ರವನ್ನು ನೀಡಲಾಯಿತು.
ಭಾರತಿ ವಡವಿಯವರು ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದ ಮುಖ್ಯೋಪಾದ್ಯಾಯ ಪದ್ಮವತಿ ಶ್ರೀನಿವಾಸ ಜೋಶಿ ಹಾಗೂ ಸಹಶಿಕ್ಷಕರು ಸಿಬ್ಬಂದಿ ವರ್ಗದ ಸಹಕಾರವನ್ನು ಕೊಂಡಾಡಿದರು. ಕಾರ್ಯದರ್ಶಿ ಗುಂಡೇನಟ್ಟಿ ಮಧುಕರ, ಸದಸ್ಯರಾದ ಡಾ. ಜಯಂತ ಕಿತ್ತೂರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 