ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮ
Even if a man has all the wealth, if he has to enjoy it, health is good
ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮ
ಬ್ಯಾಡಗಿ 28: ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕೆಂದು ಬಿಜೆಪಿ ಯುವ ಮುಖಂಡ ಪರಶುರಾಮ ಉಜನಿಕೊಪ್ಪ ಹೇಳಿದರು.ಸೋಮವಾರ ಅವರು ಸ್ಥಳೀಯ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಹುಬ್ಬಳ್ಳಿಯ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆಯು ಉಚಿತವಾಗಿ ಏರಿ್ಡಸಿದ್ದ ಕಣ್ಣಿನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಪ್ರಪಂಚ ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ ಕಣ್ಣಿನ ಆರೋಗ್ಯ ಬಹಳ ಅವಶ್ಯಕವಾಗಿದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾದರೆ ನಾವು ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಹೊಂದಲು ಸಾಧ್ಯ. ಸರ್ಕಾರಗಳ ಸೌಲಭ್ಯ ಬಡವರಿಗೆ ತಲುಪಲು ವಿದ್ಯಾವಂತರು ಕ್ರೀಯಾಶೀಲರಾಗಬೇಕು ಎಂದರು.ಡಿಪೋ ಮ್ಯಾನೇಜರ್ ಜೆ.ಬಿ.ಆಲದಕಟ್ಟಿ ಮಾತನಾಡಿಪ್ರತಿಯೊಬ್ಬ ಮನುಷ್ಯರಿಗೂ ಕಣ್ಣು ಅತಿ ಮುಖ್ಯ ಅಂಗ. ಹಾಗಾಗಿ, ಕಣ್ಣಿನ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕಾಗಿದೆ.40 ವರ್ಷದ ಬಳಿಕ ಪ್ರತಿಯೊಬ್ಬರಿಗೂ ಕಣ್ಣು ದೃಷ್ಟಿಯಲ್ಲಿ ದೋಷ ಸಾಮಾನ್ಯ ವಾಗಿ ಕಾಣಿಸಿಕೊಳ್ಳುತ್ತದೆ. ಅಂತಹ ಸಂದರ್ಭದಲ್ಲಿ ವೈದ್ಯರ ಬಳಿ ಸೂಕ್ತವಾದ ಚಿಕಿತ್ಸೆ ಪಡೆಯಬೇಕು.ಹಿರಿಯರಿಗೆ ಮಕ್ಕಳು ಇಂತಹ ಉಚಿತ ತಪಾಸಣೆಗೆ ಕರೆತರುವ ಮೂಲಕ ಹಿರಿಯರ ಸೇವೆಗೆ ಬದ್ದರಾಗಿರಬೇಕೆಂದರುಈ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ನಿಯಂತ್ರಣಾಧಿಕಾರಿ ಈರ್ಪ ಇಟಗಿ, ಮಾಲತೇಶ ಬೆನ್ನೂರ, ಅಂಗಡಿ, ಕಣ್ಣಿನ ಆಸ್ಪತ್ರೆ ವೈದ್ಯಾಧಿಕಾರಿಗಳಾದ ಇಮ್ತಿಯಾಜ್ ಶೇಖ, ಎಚ್. ಪ್ರೇಮಾ, ಸ್ನೇಹಲ್, ನಿಖಿತಾ ಬೊಸ್ಲೇ, ಅಂಜಲಿ ಕುರಬಗೇರಿಮಠ ಸೇರಿದಂತೆ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 