ಆದರ್ಶ ಗುಣಗಳನ್ನು ಪ್ರತಿಯೊಬ್ಬನೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು

ಆದರ್ಶ ಗುಣಗಳನ್ನು ಪ್ರತಿಯೊಬ್ಬನೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು Everyone should adopt ideal qualities in life and walk on the right path

ಬ್ಯಾಡಗಿ 05 : ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬನೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ ಹೇಳಿದರು.ತಾಲೂಕಾಡಳಿತ, ತಾಲೂಕು ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ  ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರುಕುಲಗೋತ್ರಗಳ ವರ್ಣಭೇದವನ್ನು ಖಂಡಿಸುತ್ತಾ ಉದ್ಧಾರಕ್ಕಾಗಿ ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶ ಗುಣಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.ಈ ಸಂದರ್ಭದಲ್ಲಿ ಎಸ್ ಆರ್ ಹಿರೇಮಠ. ನಾಗರಾಜ ಗುಳೇರ್ .ಆರ್ ಎ ಕಡಕೋಳ. ಮಮತಾ ಕೊಪ್ಪಳ. ನವ್ಯಾ ಮಜ್ಜಿಗಿ. ಕಾವ್ಯ ತಳವಾರ. ರಾಧಾ ರಾವಳ. ಫಕ್ಕೀರೆಶ ತಳವಾರ ಹಾಗೂ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು