ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಮುಂದಾಗಿ: ಪ್ರದೀಪಕುಮಾರ ಇಂಡಿ

Everyone should take the lead in creating a clean environment: Pradeep Kumar Indi

ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಮುಂದಾಗಿ: ಪ್ರದೀಪಕುಮಾರ ಇಂಡಿ  

ಬೆಳಗಾವಿ 06: ಜಗತ್ತಿನಾದ್ಯಂತ ಜೂ. 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ಲಾಸ್ಟಿಕ್ ಮುಕ್ತ ಪರಿಸರ ಈ ವರ್ಷದ ಆಚರಣೆಯಾಗಿದೆ. ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಪ್ಲಾಸ್ಟಿಕ್‌ನ್ನು ಬಳಸದಂತೆ ಎಲ್ಲರೂ ಸಂಕಲ್ಪ ಮಾಡುವ ಮೂಲಕ ಸ್ವಚ್ಚ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕಾಗಿದೆ ಎಂದು ಬೆಳಗಾವಿ ಶುಗರ್ಸ್‌  ಕಾರ್ಖಾನೆಯ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಅವರು ಹೇಳಿದರು. 

ಬೆಳಗಾವಿ ಶುಗರ್ಸ್‌ ಕಾರ್ಖಾನೆಯ ಆವರಣದಲ್ಲಿ 2025 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅತಿಯಾದ ಪ್ಲಾಸ್ಟಿಕ್ ಬಳಕೆ ಮನುಷ್ಯರು ಸೇರಿದಂತೆ ಪರಿಸರದಲ್ಲಿನ ಎಲ್ಲ ಜೀವ ಸಂಕುಲಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.  ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದು ಮತ್ತು ಪರಿಸರ ಸ್ನೇಹಿ ಜೀವನ ಕ್ರಮದಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದಾಗಿದೆ, ಈ ದಿಸೆಯಲ್ಲಿ ಎಲ್ಲರೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊಂದಬೇಕು ಎಂದು ಹೇಳಿದರು.  

ನಮ್ಮ ಕಾರ್ಖಾನೆಯ ಆವರಣದಲ್ಲಿ ಈಗಾಗಲೇ ಸುಮಾರು 3500 ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿಯೂ ನಮ್ಮ ಕಾರ್ಖಾನೆಯ ಆವರಣದಲ್ಲಿ ಸುಮಾರು 1500 ವಿವಿಧ ತಳಿಯ ಸಸಿಗಳನ್ನು ನೆಟ್ಟು ಪೋಷಿಸಲಾಗುವದು ಎಂದರು.  

ಹಿರಿಯ ಉಪಾಧ್ಯಕ್ಷ ಎಲ್‌.ಆರ್‌.ಕಾರಗಿ, ಎ.ಎಸ್‌.ರಾಣಾ, ಪ್ರಧಾನ ವ್ಯವಸ್ಥಾಪಕ ಎಸ್‌.ಆರ್‌.ಬಿರ್ಜೆ, ಸಹಾಯಕ ಪ್ರಧಾನ ವ್ಯವಸ್ಥಾಪಕ ಎನ್‌.ಬಿ ಚೌಗಲಾ, ಹಿರಿಯ ವ್ಯವಸ್ಥಾಪಕ ವರ್ಗದವರು  ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಕಾರ್ಖಾನೆಯ ಕಾರ್ಮಿಕರು ಮತ್ತು ಸಿಬ್ಬಂದಿಗಳು ಇತರರು ಇದ್ದರು.