ಶ್ರೀ ಸಾಯಿ ಸಹಕಾರಿಯಿಂದ ಗ್ರಾಹಕರಿಗೆ ಉತ್ತಮ ಸೇವೆ
ಲೋಕದರ್ಶನ ವರದಿ
ಬೆಳಗಾವಿ : ವಿಧಾನ ಪರಿಷತ್ನ ಸಕರ್ಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾರ್ಗದರ್ಶನದಲ್ಲಿ ಶ್ರೀ ಸಾಯಿ ಕ್ರೆಡಿಟ್ ಸೌಹಾರ್ದ ಸಹಕಾರಿಯು ಉತ್ತಮ ರೀತಿಯಲ್ಲಿ ಗ್ರಾಹಕರಿಗೆ ಸೇವೆಗಳನ್ನು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಬೆಳಗಾವಿಯ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅನೀಲ ಮುಳವಾಡಮಠ ಹೇಳಿದರು.
ಅವರು ಬುಧವಾರ ಇಲ್ಲಿನ ಬಡಕಲ ಗಲ್ಲಿಯಲ್ಲಿ ಸಹಕಾರಿಯ 3ನೇ ಶಾಖೆಯನ್ನು ಹಾಗೂ ಇ ಸ್ಟಾಪಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಹಕರ ವಿಶ್ವಾಸದೊಂದಿಗೆ ಸಹಕಾರಿಯ ಆಡಳಿತ ಮಂಡಳಿಯವರು ಕಾರ್ಯದೊಂದಿಗೆ ಸಿಬ್ಬಂದಿಗಳ ನಿಸ್ವಾರ್ಥ ಸೇವೆಯಿಂದ ಇಂದು ಗ್ರಾಹಕರ ಅಗತ್ಯ ಸೇವೆಗಳನ್ನು ನೀಡುತ್ತಿದೆ ಎಂದರು. ಶ್ರೀ ಸಾಯಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಪ್ರಧಾನ ವ್ಯವಸ್ಥಾಪಕ ಎಮ್.ಬಿ.ಬಡಿಗೇರ ಮಾತನಾಡಿ, ಸಹಕಾರಿಯ ಎಲ್ಲ ಶಾಖೆಗಳಲ್ಲಿ ಇ ಸ್ಟಾಪಿಂಗ್, ಪಹಣಿ ಪತ್ರಿಕೆ, ಬಸ್, ವಿಮಾನ, ರೈಲು ಟಿಕೆಟ್ ಕಾಯ್ದುರಿಸುವಿಕೆ, ವಾಹನಗಳ ವಿಮೆ ಸೇರಿದಂತೆ ಅನೇಕ ಯೋಜನೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿದೆ ಎಂದರು.
ನ್ಯಾಯವಾದಿಗಳಾದ ಚಂದ್ರಶೇಖರ ಮಜಗಿ, ಅನೀಲ ಮಾಂಗಳೇಕರ, ಬೆಳಗಾವಿ ಶಾಖೆಯ ಉಪಾಧ್ಯಕ್ಷ ಬಿ.ಬಿ. ಪಾಟೀಲ, ನಿದರ್ೇಶಕರಾದ ಪ್ರವೀಣ ಮೂತಿಮಠ, ಅರುಣ ಮಾನೆ, ಎಸ್.ಆರ್. ಹಿರೇಮಠ, ಅಪ್ಪಾಸಾಹೇಬ ಕೇರೂರೆ, ಗಿರೀಶ ಕತ್ತಿಶೆಟ್ಟಿ ಸೇರಿದಂತೆ ಸಹಕಾರಿಯ ಎಲ್ಲ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 