ಜಾತ್ರೆ, ಉತ್ಸವಗಳು ಸಂಸ್ಕೃತಿಯ ಬೇರುಗಳು : ವಿದ್ಯಾಧರ ಸವದಿ
Fairs, festivals are the roots of culture: Vidyadhar Savadi
ರಬಕವಿ-ಬನಹಟ್ಟಿ 12 : ಸನಾತನ ಹಿಂದೂ ಧರ್ಮದಲ್ಲಿ ಜಾತ್ರೆ, ಉತ್ಸವಗಳು ಮಹತ್ವದ್ದಾಗಿವೆ. ಭಾರತೀಯ ಸಂಸ್ಕೃತಿ, ಸಂಸ್ಕಾರಗಳ ಮೂಲಬೇರುಗಳಂತಿರುವ ಉತ್ಸವ, ಜಾತ್ರೆಗಳು ಪರಸ್ಪರಲ್ಲಿ ಐಕ್ಯತೆ, ಬಾಂಧವ್ಯ ಗಟ್ಟಿಗೊಳಿಸವ ಹಾಗೂ ಸಹಕಾರ ಗುಣಗಳನ್ನು ವೃದ್ಧಿಸುತ್ತವೆಂದು ಬಿಜೆಪಿ ಯುವ ಧುರೀಣ ವಿದ್ಯಾಧರ ಸವದಿ ಹೇಳಿದರು.
ತಾಲೂಕಿನ ನಾವಲಗಿ ಗ್ರಾಮದ ಉದ್ಭವ ಮೂರ್ತಿ ಶ್ರೀ ಮಾರುತೇಶ್ವರ ಕಾರ್ತಿಕೋತ್ಸವ ನಿಮಿತ್ಯ ಗುರುವಾರ ರಾತ್ರಿ ಗೆಳೆಯರ ಬಳಗ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಲೆಗಳು ನಾಡಿನ ಸಾಂಸ್ಕೃತಿಕ ಸಿರಿತನದ ಸಂಕೇತವಾದರೆ, ಕಲಾವಿದರು ಕಲಾದೇವಿಯ ಸುತರಾಗಿದ್ದು, ಅವರನ್ನು ಪ್ರೋತ್ಸಾಹಿಸುವ ಮೂಲಕ ಕಲೆಯನ್ನು ಜೀವಂತವಾಗಿರಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.
ವೇದಿಕೆಯಲ್ಲಿ ಸೋಮು ಹಿರೇಮಠ, ಗುರು ಮರಡಿಮಠ, ಶಂಕರ ಗುರೂಜಿ, ಹನುಮಂತ ಮಗದುಮ್, ಆನಂದ ಕಂಪು, ಮಹೇಶ ಚಿಂಚಖಂಡಿ, ಬಸವರಾಜ ಗಣಿ, ಗಂಗಪ್ಪ ಅಮ್ಮಲಜೇರಿ, ಸಿದ್ದು ಕಂಚು, ಈರ್ಪ ಕಡಕಬಾವಿ, ಮಂಜು ಕಾಂತಿ, ಕಲ್ಮೇಶ ದೇವದಾಸ, ಪ್ರಕಾಶ ಪಟ್ಟಣಶೆಟ್ಟಿ ಮುಂತಾದವರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 