ಧಾರವಾಡ ಹೈಕೋರ್ಟ್ ಗೆ ಹುಸಿ ಬಾಂಬ್ ಕರೆ
Fake bomb call to Dharwad High Court
ಧಾರವಾಡ: ಇಲ್ಲಿಯ ಹೈಕೋರ್ಟ್ ಪೀಠದ ಆವರಣದಲ್ಲಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಸಿದ್ದು, ಪೊಲೀಸ್ ಇಲಾಖೆ ಶೋಧನಾ ಕಾರ್ಯ ಕೈಗೊಂಡಿದೆ.ಮಧ್ಯಾಹ್ನ 1:55 ಕ್ಕೆ ಬಾಂಬ್ ಬ್ಲಾಸ್ಟ್ ಆಗಲಿದೆ ಎಂಬ ಬೆದರಿಕೆ ಹಿನ್ನಲೆಯಲ್ಲಿ ಹೈ ಅಲರ್ಟ್ ಮಾಡಿದಲ್ಲದೆ ಶ್ವಾನಗಳೊಂದಿಗೆ ಶೋಧನಾ ಕಾರ್ಯ ನಡೆಸಲಾಗಿದೆ. ಬಾಂಬ್ ನಿಷ್ಕಿಯ ದಳ ಸಿಬ್ಬಂದಿ ಕೂಡ ಆಗಮಿಸಿದ್ದು, ಬಾಂಬ್ ಶೋಧಿಸುವ ಕಾರ್ಯ ಕೈಗೊಂಡಿತು.
ಈ ವೇಳೆ ಪೀಠದ ಸಿಬ್ಬಂದಿಗಳನ್ನು ಹೊರಗಡೆ ಕಳುಹಿಸಿದ್ದು, ನ್ಯಾಯಾಲಯ ಕಲಾಪಗಳಿಗೆ ರಜೆ ಘೋಷಿಸಲಾಗಿದೆ. ಸದ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ತೊಡಗಿದ್ದು, ಶೋಧನಾ ಕಾರ್ಯ ಮುಂದುವರೆದಿದೆ.
ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಸ್ಪೋಟಿಸುವ ಬೆದರಿಕೆ ಇ ಮೇಲ್ ಬಂದಿದೆ. ಮಹಮ್ಮದ್ ರಾಜಗುರು ಎಂಬಾತನಿಂದ ಜಿಲ್ಲಾ ನ್ಯಾಯಾಧೀಶರಿಗೆ ಇ-ಮೇಲ್ ಮಾಡಲಾಗಿದೆ. ಭಯಗೊಂಡು ಜನರು ನ್ಯಾಯಾಲಯದಿಂದ ಹೊರಗೆ ಬಂದಿದ್ದಾರೆ. ಪೊಲೀಸ್ ತಂಡ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಗದಗ ಎಸ್ಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 