ಪುರಸಭೆ ಬಡ್ತಿ ಅಧಿಕಾರಿ ಬೀಳ್ಕೊಡುಗೆ ಹಾಗೂ ಸ್ವಾಗತ ಸಮಾರಂಭ
Farewell and welcome ceremony for promoted municipal officer
ಹೂವಿನಹಡಗಲಿ 19: ಪಟ್ಟಣದ ಪುರಸಭೆ ಯಲ್ಲಿ ಪಟ್ಟಣಕ್ಕೆ ಆಗಮಿಸಿದ ನೂತನ ಅಧಿಕಾರಿಗಳ ಸ್ವಾಗತ ಹಾಗೂ ಪದೋನ್ನತಿಯೊಂದಿಗೆ ಇಲ್ಲಿಂದ ವರ್ಗಾವಣೆಗೊಂಡ ಇಮಾಮ್ ಸಾಬ್ ಅವರಿಗೆ ಪುರಸಭೆ ಇಲಾಖೆ ಸಿಬ್ಬಂದಿ ಯಿಂದ ಹೃದಯಸ್ಪರ್ಶಿ ಸಮಾರಂಭ ಸೋಮವಾರ ನಡೆಯಿತು. ಕಳೆದ 20 ವರ್ಷದಿಂದ ಪುರಸಭೆ ಯಲ್ಲಿ ವ್ಯವಸ್ಥಾಪಕರಾಗಿ, ಮುಖ್ಯಾಧಿಕಾರಿ ಯಾಗಿ ಸುದೀರ್ಘ ಸೇವೆ ಸಲ್ಲಿಸಿದ ಇಮಾಮ್ ಸಾಬ್ ಪೌರಾಡಳಿತ ಅವರು ಪದೋನ್ನತಿಯೊಂದಿಗೆ ವರ್ಗಾವಣೆಗೊಂಡಿದ್ದು, ಇದೇ ವೇಳೆ ನೂತನ ಮುಖ್ಯಾಧಿಕಾರಿ ಜಿ.ಹನುಮಂತಪ್ಪ ಆಗಮಿಸಿದ
ಅವರನ್ನು ಸನ್ಮಾನಿಸಲಾಯಿತು.ಪುರಸಭೆ ಆಡಳಿತಾಧಿಕಾರಿ ಸುರೇಶ ಕುಮಾರ , ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅದ್ಯಕ್ಷ ಎ.ಕೊಟ್ರಗೌಡ, ಪತ್ರಕರ್ತ ಎಸ್. ನಿಂಗರಾಜ ಮಾತನಾಡಿ ಇಮಾಮ್ ಸಾಬ್ , ದಕ್ಷತೆ, ಪ್ರಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡಿದ ಪರಿಣಾಮವಾಗಿ ಅವರು ಇಂದು ಪದೋನ್ನತಿಯೊಂದಿಗೆ ವರ್ಗಾವಣೆಗೊಂಡಿರುವುದು ಸಂತಸದ ಸಂಗತಿ ಎಂದರು. ಪದೋನ್ನತಿಯೊಂದಿಗೆ ವರ್ಗಾವಣೆ ಗೊಂಡ ಇಮಾಮ್ ಸಾಬ್ ಸನ್ಮಾನ ಸ್ವೀಕರಿಸಿ ಮಾತನಾಡಿ ಜನತೆಯ ಪ್ರೀತಿ, ವಿಶ್ವಾಸ ತೀರಿಸಲಾಗದ ಋಣ ಎಂದ ಅವರು ಮೂಲಸೌಕರ್ಯ ಕಲ್ಪಿಸಲು ನೀಡಿದ ಸಹಕಾರ ಮರೆಯಲಾಗದು ಎಂದರು. ಇದೇ ವೇಳೆ ಪುರಸಭೆ ಮಾಜಿ ಅದ್ಯಕ್ಷೆ ಮತ್ತು ಸದಸ್ಯರು. ಸಿಬ್ಬಂದಿ ವರ್ಗದವರು ಹೃದಯ ಸ್ಪರ್ಶಿ ಸಮಾರಂಭ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 