ರೈತ ಸಂಘದಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ
Farmers' Association lays siege to Suvarna Vidhana Soudha
ಯರಗಟ್ಟಿ: ರೈತರ ಹತ್ತು ಹಲವು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಾವಿರಾರು ಸಂಖ್ಯೆಯಲ್ಲಿ ರೈತರು ಸೇರಬೇಕು ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಕುಮಾರ ವರದಿ ಕರೆ ನೀಡಿದರು.ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಂಗಳವಾರ ಕರಪತ್ರ ವಿತರಿಸಿ ಮಾತನಾಡಿದ ಅವರು, 11ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು ಮತ್ತು ಕಬ್ಬಿನ ಉತ್ಪನಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬರುವ ತೆರಿಗೆಯಲ್ಲಿ ತಲಾ ಒಂದು ಸಾವಿರ ರೂಪಾಯಿಗಳನ್ನು ಬೆಂಬಲ ಬೆಲೆ ಕೊಡಬೇಕು. ರೈತರ ಪಂಪ್ ಸೆಟ್ ಗಳಿಗೆ ಹೋಗಲು 12 ಗಂಟೆ ತ್ರಿಪೇಸ್ ವಿದ್ಯುತ್ ನೀಡಬೇಕು ಹಾಗೂ ರೈತರ ಸಮಸ್ಯೆಗಳಿಗೆ ಕೂಡಲೆ ಪರಿಹಾರ ನೀಡುಬೇಕು ಎಂದು ಆಗ್ರಹಿಸಿದರು.ರೈತ ಸಂಘದ ಪಾಂಡು ಬಿರನಗಡ್ಡಿ, ವಾಸು ಪಂಡೊಳ್ಳಿ ಬಸವರಾಜ ಬಿಜ್ಜೂರ, ಸತ್ಯಪ್ಪ ಮಲ್ಲಾಪೂರ, ಯಲ್ಲನಾಯ್ಕ ನಾಯ್ಕ, ಮಂಜು ಪೂಜೇರ, ಸತ್ಯಪ್ಪ ಮಲ್ಲಾಪೂರ, ರಾಮಕೃಷ್ಣ ಎಳ್ಳಮ್ಮಿ, ರಂಗಪ್ಪ ಗಂಗರಡ್ಡಿ, ಯಕ್ಕೇರ್ಪ ತಳವಾರ, ಗಿರೇಪ್ಪ ಗಂಗರೆಡ್ಡಿ, ಯಕ್ಕೇರೆಪ್ಪ ತಳವಾರ, ಸಿಂಧೂರ ತೆಗ್ಗಿ, ಅಶೋಕ ನಂದಿ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 