ತೊಗರಿ ಬೆಳೆ ವಿಮಾ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘದಿಂದ ಮನವಿ
Farmers' association appeals for crop insurance compensation
ದೇವರಹಿಪ್ಪರಗಿ 03: ತಾಲೂಕಿನ ರೈತರು ತೊಗರಿ ಬೆಳೆಗೆ ವಿಮೆ ತುಂಬಿದ್ದು ಅಂತಹ ರೈತರಿಗೆ ವಿಮೆ ಪರಿಹಾರ ಕೂಡಲೇ ನೀಡಬೇಕೆಂದು ಆಗ್ರಹಿಸಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಎದುರು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೃಷಿ ಅಧಿಕಾರಿ ಶರಣಗೌಡ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಕೃಷಿ ಇಲಾಖೆಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲೂಕು ಘಟಕದ ಅಧ್ಯಕ್ಷರಾದ ಈರ್ಪ ಕುಳೆಕುಮಟಗಿ ಹಾಗೂ ಗೌರವಾಧ್ಯಕ್ಷರಾದ ಶಿವಾನಂದ ಹಿರೇಮಠ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿ ಮಾತನಾಡಿ ಈ ಬಾರಿ ತೊಗರಿ ಬೆಳೆ ವಿಫಲವಾಗಿದ್ದು ರೈತರಿಗೆ ನಷ್ಟವಾಗಿದೆ.
ಶೇ 90ರಷ್ಟು ತೊಗರಿ ಬೆಳೆ ಹಾಳಾಗಿದೆ.ಅಕಾಲಿಕ ಮಳೆ ಹಾಗೂ ಹವಾಮಾನದಲ್ಲಿ ಏರುಪೇರು ಹೀಗೆ ಹಲವಾರು ಕಾರಣಗಳಿಂದ ಬೆಳೆ ವಿಫಲವಾಗಿದೆ ಹಾಗೂ ಕಲಬುರ್ಗಿ ಜಿಲ್ಲೆಯ ರೈತರಿಗೆ ವಿಮೆ ಪರಿಹಾರ ಜಮಾ ಆಗಿದೆ ಆದರೆ ವಿಜಯಪುರ ಜಿಲ್ಲೆಯ ರೈತರಿಗೆ ವಿಮಾ ಕಂಪನಿಯಿಂದ ಇಲ್ಲಿಯವರೆಗೂ ಪರಿಹಾರ ಜಮಾ ಆಗಿಲ್ಲ. ರೈತರಿಗೆ ಈ ಕೂಡಲೇ ಪರಿಹಾರ ನೀಡಿ ರೈತರ ತೊಂದರೆಗಳಿಗೆ ಸ್ಪಂದಿಸಲು ಓರಿಯೆಂಟಲ್ ವಿಮಾ ಕಂಪನಿ ಅಧಿಕಾರಿ ಸುದೀರ್ ಹಾಗೂ ಕೃಷಿ ಅಧಿಕಾರಿ ಶರಣಗೌಡ ಬಿರಾದಾರ ಅವರಿಗೆ ಆಗ್ರಹಿಸಿದರು.ಮನವಿ ಪತ್ರ ಸ್ವೀಕರಿಸಿದ ಕೃಷಿ ಅಧಿಕಾರಿ ಶರಣಗೌಡ ಬಿರಾದಾರ ಅವರು ಮಾತನಾಡಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರುಗಳಾದ ಚಂದ್ರಕಾಂತ ಪ್ಯಾಟಿ, ಸಂಪತ್ ಜಮಾದಾರ,ಶಾಖೀರಾ ಹೆಬ್ಬಾಳ, ಚೆನ್ನಮ್ಮ ಮೆತ್ರಿ, ಸುನಂದಾ ಸೊನ್ನಳ್ಳಿ, ಮಲ್ಲನಗೌಡ ಬಿರಾದಾರ, ಭೀಮನಗೌಡ ಬಿರಾದಾರ, ಕಾಶಿನಾಥ ಬಿರಾದಾರ, ಚಂದ್ರಕಾಂತ ಕುಂಬಾರ, ಲಕ್ಕಪ್ಪ ಹೂಗಾರ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 