ನಾನಾ ಬೇಡಿಕೆ ಈಡೇರಿಕೆಗೆ ರೈತ ಸಂಘ ಒತ್ತಾಯ
Farmers' association demands fulfillment of various demands
ಹೂವಿನಹಡಗಲಿ 9 - ರೈತರ ನಾನಾ ಸಮಸ್ಯೆಗಳನ್ನುಬಗೆಹರಿಸುವಂತೆ, ಕರ್ನಾಟಕ ರಾಜ್ಯ ರೈತ ಸಂಘ ಮಂಗಳವಾರ ಸಂಸದ ತುಕಾರಾಂ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿತು. ತಾಲ್ಲೂಕಿನ ಕೊಯಿಲಾರಗಟ್ಟಿ ಕೃಷಿ ಸಂಶೋಧನೆ ಕೇಂದ್ರ, ರಸ ಗೊಬ್ಬರ, ಗದಗ- ್ಷಹರಪನಹಳ್ಳಿ ರೈಲ್ವೆ ಮಾರ್ಗ , ಪೊಲೀಸ್ ತರಬೇತಿ ಕೇಂದ್ರ, ಭೂ ಪರಿಹಾರ ಮತ್ತು ಅಂಚೆ ಕಚೇರಿ ಕಟ್ಟಡ ನಿರ್ಮಾಣ , ರೈತರ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಮನವಿಯನ್ನು ನೀಡಿದರು. ಇದೇ ವೇಳೆ ಶಾಸಕ ಕೃಷ್ಣನಾಯಕ, ಗೌರವಾದ್ಯಕ್ಷ ಮಡ್ಡಿ ಪಕ್ಕೀರ್ಪ, ಉಪಾಧ್ಯಕ್ಷ ವಿಠಲ ನಾಯ್ಡ, ವಿ.ಬಿ.ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಶಿವರಾಜ, ದುರುಗಪ್ಪ ಹೆಚ್. ಗನ್ನಿಸಾಬ್ ಇದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 