ರೈತರು: ರಸಗೊಬ್ಬರಗಳಿಗೆ ಎಮ್.ಆರ್.ಪಿ ಬೆಲೆಗಿಂತ ಹೆಚ್ಚಿನ ದರವನ್ನು ಪಡೆಯುವತ್ತಿಲ್ಲ
Farmers: They are not getting more than the MRP price for fertilizers
ರೈತರು: ರಸಗೊಬ್ಬರಗಳಿಗೆ ಎಮ್.ಆರ್.ಪಿ ಬೆಲೆಗಿಂತ ಹೆಚ್ಚಿನ ದರವನ್ನು ಪಡೆಯುವತ್ತಿಲ್ಲ
ಕಂಪ್ಲಿ 04 : ತಾಲೂಕಿನಲ್ಲಿ ಎಲ್ಲಾ ರೈತರಿಗೆ ರಸಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ ತಲುಪದಿರುವುದು ಮತ್ತು ಎಮ್.ಆರ್.ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ವಿರೋಧಿಸಿ,ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಘಟಕದ ನೇತೃತ್ವದಲ್ಲಿ ಪದಾಧಿಕಾರಿಗಳು ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ತಹಶೀಲ್ದಾರ್ ಮಂಜುನಾಥ ಇವರಿಗೆ ಮನವಿ ಪತ್ರ ಸಲ್ಲಿಸಿದರು.ನಂತರ ತಾಲೂಕಾಧ್ಯಕ್ಷ ವಡ್ರು ವಿರೇಶ ಮಾತನಾಡಿ, ರೈತರಿಗೆ ರಸಗೊಬ್ಬರ ಸಮರ್ಕವಾಗಿ ಪೂರೈಕೆಯಾಗುತ್ತಿಲ್ಲ. ಮತ್ತು ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ಇದರ ನಡುವೆ ಇಲ್ಲಿನ ರಸಗೊಬ್ಬರ ಮಾರಾಟಗಾರರು ಎಂ ಆರ್ಿ ದರಕ್ಕಿಂತ ಅಧಿಕ ದರಲ್ಲಿ ರೈತರಿಗೆ ಗೊಬ್ಬರ ನೀಡುತ್ತಿದ್ದಾರೆ.. ರೈತರ ಮಾತಿಗೆ ಯಾವುದೇ ಕವಡೆ ಕಾಸಿನ ಕಿಮ್ಮತ್ತು ನೀಡತು ಇಲ್ಲ ರೈತರಿಗೆ ರಸಗೊಬ್ಬರ ಬೇಕಾದಲ್ಲಿ ಪಹಣಿ, ಆಧಾರ್ಕಾರ್ಡ್ ಮತ್ತು ಸಹಿ ಮಾಡಿದ ಇ-ಸ್ಟ್ಯಾಂಪ್, ಖಾಲಿ ಬಾಂಡ್ ಪೇಪರ್ ನೀಡಬೇಕು. ಹಾಗಿದ್ದಲ್ಲಿ ರಸಗೊಬ್ಬರ ನೀಡಲಾಗುತ್ತದೆ ಎಂದು ರೈತರಿಗೆ ಒತ್ತಡ ಏರುತ್ತಿದ್ದಾರೆ ಕಳೆದ ಒಂದು ವಾರದಿಂದ ಎಮ್ಮಿಗನೂರು ಗ್ರಾಮದಲ್ಲಿ ರಸಗೊಬ್ಬರ ಎಮ್.ಆರ್.ಪಿ ಬೆಲೆಗಿಂತ ಹೆಚ್ಚಿನ ಧರಕ್ಕೆ ಬಿಲ್ ಸಮೇತ ಮಾರಾಟ ಮಾಡಿರುತ್ತಾರೆ. ಈ ವಿಷಯವಾಗಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿಗಳಿಗೆ ಆಧಾರ ಸಮೇತ ದೂರು ನೀಡಿದರೂ ನಮ್ಮನ್ನು ವಿತರಕರ ಅಂಗಡಿಗೆ ಬನ್ನಿ ಎಂದು ತಿಳಿಸಿರುತ್ತಾರೆ. ಎಲ್ಲಾ ಸರಿಯಾಗಿದೆ ಎಂದು ಹೇಳಿದ್ದು, ತದನಂತರದಲ್ಲಿ ನಮ್ಮ ಹತ್ತಿರ ಬಂದು ವಿತರಕರ ತಪ್ಪು ಏನು ಇಲ್ಲ ಎಂದು ನಮ್ಮ ಮನವೊಲಿಸಲು ಪ್ರಯತ್ನಿಸಿರುತ್ತಾರೆ. ಕಣ್ಣೀದುರಿಗೆ ಜಲ್ ಮತ್ತು ಚೀಲದ ಮೇಲಿನ ಎಮ್.ಆರ್.ಪಿ ಬೆಲೆ ಇದ್ದರೂ ಸಹ ಅವರು ವಿತರಕರ ಪರವಾಗಿ ಮಾತನಾಡುವುದು ಅನುಮಾನಕ್ಕೆ ಕಾರಣವಾಗಿದೆ. ಆದ್ದರಿಂದ ಅಧಿಕಾರಿಗಳ ರೈತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ.ವಿ.ಗೌಡ. ರೈತ ಮುಖಂಡರಾದ ಕೊಟ್ಟೂರು ರಮೇಶ, ಆದೋನಿ ರಂಗಪ್ಪ, ತಿಮ್ಮಪ್ಪ, ಶ್ರೀಧರ, ಗಾದಿಲಿಂಗಪ್ಪ, ಜಡೆಪ್ಪ, ಧರ್ಮಣ್ಣ, ಶ್ರೀಮಂತಸ್ವಾಮಿ, ಕೆ.ಎಂ.ಅಡಿವೆಯ್ಯಸ್ಚಾಮಿ, ಗುಡಿಸಲಿ ರಾಜಾಸಾಬ್, ಬುರ್ರೆಡ್ಡಿ ಬಸವರಾಜ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 