ರೈತರು ನೀರು ಮತ್ತು ಮಣ್ಣಿನ ಸಂರಕ್ಷಣೆ ಮಾಡಿ: ಗುಂಗಾಡಿ
ಲೋಕದರ್ಶನ ವರದಿ
ಯಲಬುಗರ್ಾ 25: ರೈತರು ನಿಮ್ಮ ನಿಮ್ಮ ಜಮಿನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ನೀರನ್ನು ನಿಮ್ಮ ಹೋಲದಲ್ಲಿಯೇ ತಡೆಯಿಡಿಯಬೇಕು ಇದರಿಂದ ನಿಮ್ಮ ಹೋಲಗಳಲ್ಲಿ ಅಂತರ್ಜಲ ಹೆಚ್ಚಾಗುತ್ತದೆ ಎಂದು ಕೃಷಿ ಇಲಾಖೆಯ ತಾಲೂಕ ಸಹಾಯಕ ನಿರ್ದೇ ಶಕ ಶರಣಪ್ಪ ಗುಂಗಾಡಿ ಹೇಳಿದರು.
ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮ ಪಂಚಾಯತ ಆವರಣದಲ್ಲಿ ಕೃಷಿ ಇಲಾಖೆ, ತಾಪಂ, ಕೃಷಿ ವಿಶ್ವ ವಿದ್ಯಾಲಯ ಹಾಗೂ ಸುಧಾರಣಾ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಸಹಯೋಗದಲ್ಲಿ ನಡೆದ ಜಲಶಕ್ತಿ ಅಭಿಯಾನದ ವಿಶೇಷ ಗ್ರಾಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀರು ನಿಮ್ಮಲ್ಲಿಯೇ ಲಭ್ಯವಿದ್ದರೆ ಮಳೆಯನ್ನು ಆಶ್ರಯಿಸದೆ ಸುಲಭವಾಗಿ ಮತ್ತು ಮುಂಗಾರು ಮತ್ತು ಇಂಗಾರುಗಳಲ್ಲಿ ಸಮಯಕ್ಕೆ ಸರಿಯಾಗಿ ಬಿತ್ತನೆ ಮಾಡಲು ಅನುಕೂಲವಾಗುತ್ತದೆ ಇಂದು ಪ್ರತಿಯೊಬ್ಬರು ನೀರಿನ ಮಹತ್ವ ತಿಳಿಯುವ ಅವಶ್ಯಕತೆ ತುಂಬಾ ಇದೆ ಯಾಕೆಂದರೆ ಇಂದೆ ನೀರನ್ನು ಹಣ ಕೊಟ್ಟು ಕೊಂಡುಕೊಳ್ಳುವ ಪರಸ್ಥಿತಿ ಬಂದಿದೆ ಮುಂದಿನ ದಿನಗಳಲ್ಲಿ ನೀರಿಗಾಗಿ ಪರಿತಪಿಸುವಂತಹ ಕಾಲ ದೂರವಿಲ್ಲಾ ಅದನ್ನು ಅರಿತುಕೊಂಡು ಎಲ್ಲರೂ ನೀರಿನ ಸಂರಕ್ಷಣೆಗೆ ಮುಂದಾಗಬೇಕು ಮತ್ತು ರಾಸಾಯನಿಕ ಗೊಬ್ಬರಗಳ ಉಪಯೋಗವನ್ನು ರೈತರು ಕಡಿಮೆ ಮಾಡಬೇಕು ಇದರಿಂದ ಮಣ್ಣಿನ ಫಲವತ್ತತೆ ಅತ್ಯಂತ ಕಡಿಮೆಯಾಗುತ್ತದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಭೀಮಣ್ಣ ಹವಳಿ, ಈರಣ್ಣ ತೋಟದ ಕೃಷಿ ಅಧಿಕಾರಿ ಪ್ರಶಾಂತಗೌಡ, ಗ್ರಾಪಂ ಸದಸ್ಯರಾದ ಹಂಪನಗೌಡ ಹಿರೇಮಠ, ರುದ್ರಪ್ಪ ಛಲವಾದಿ ಮಾತನಾಡಿದರು,
ಈ ಸಂದರ್ಭದಲ್ಲಿ ಗ್ರಾಪಂ ಅದ್ಯಕ್ಷೆ ವೀಜಯಲಕ್ಷ್ಮೀ ಆಡಿನ್ ಅದ್ಯಕ್ಷತೆವಹಿಸಿದ್ದರು, ಪಿಡಿಓ ಚನ್ನಬವನಗೌಡ ಪೋಲಿಸ್ ಪಾಟೀಲ, ಸೇರಿದಂತೆ ಗ್ರಾಪಂ ಸದಸ್ಯರು ಮಹಿಳಾ ಸಂಘದ ಸದಸ್ಯರು ರೈತರು ಸಾರ್ವಜನಿಕರು ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 