ಕಂಠಪೂರ್ತಿ ಕುಡಿದು ಬಂದು ಮಗನನ್ನೇ ಹತ್ಯೆ ಗೈದ ತಂದೆ : ಬಂಧನ
Father who killed his son while drunk: Arrested
ಲೋಕದರ್ಶನ ವರದಿ
ಹೂವಿನಹಡಗಲಿ 6: ಕುಡಿತಕ್ಕೆ ದಾಸ ನಾಗಿದ್ದ ತಂದೆಯೇ ಮಗನನ್ನು ಕೊಡಲೆಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿ,ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವ ಘಟನೆ ತಾಲ್ಲೂಕಿನ ಬೀರಬ್ಬಿ ಗ್ರಾಮದಲ್ಲಿ ಸಂಭವಿದೆ.ಕುರಿಗಾಯಿ ಬೀರೇಶ (25)ಕೊಲೆಯಾದ ಯುವಕನ ಪ್ರಕರಣ ಬಗ್ಗೆ ಬೇಧಿಸಿರುವ ಪೊಲೀಸರು ಗುರುವಾರ ತಂದೆ ಲಕ್ಷ್ಮಪ್ಪ (55) ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದರು.ಫೆ.11ರಂದು ರಾತ್ರಿ ಕಂಠ ಪೂರ್ತಿ ಕುಡಿದು ಮನೆಗೆ ಬಂದ ಆರೋಪಿ, ನಿದ್ರೆಯಲ್ಲಿದ್ದ ಮಗನ ಮೇಲೆ ಕೊಡಲಿಯಿಂದ ದಾಳಿ ನಡೆಸಿ ಕೊಲೆ ಮಾಡಿ, ಮೃತದೇಹವನ್ನು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ತಿಪ್ಪೆಗೆ ಎಸೆದಿದ್ದ. ಮಗ ಕಾಣದಿದ್ದ ಬಗ್ಗೆ ತಾಯಿ ಲಕ್ಕವ್ವ ಫೆ. 13ರಂದು ಸ್ಥಳೀಯ ಠಾಣೆಗೆ ದೂರು ನೀಡಿದ್ದರು.
ತಿಪ್ಪೆಯಲ್ಲಿದ್ದ ಪ್ಲಾಸ್ಟಿಕ್ ಚೀಲದಲ್ಲಿ ದುರ್ನಾತ ಬಂದಿದ್ದರಿಂದ ಗ್ರಾಮಸ್ಥರು ಪರೀಶೀಲಿಸಿದಾಗ ಬೀರೇಶ ಶವ ಪತ್ತೆಯಾಗಿದೆ. ಮಾಹಿತಿ ಮೇರೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಡಿವೈಎಸ್ಪಿ ಸಂತೋಷ ಚವ್ಹಾಣ, ಸಿಪಿಐ ಮಲ್ಲಪ್ಪ ಹೂಗಾರ್, ಪಿಎಸ್ಐ ಭರತ್ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿದ್ದರು.’ಲಕ್ಷ್ಮಪ್ಪ ಮದ್ಯ ಸೇವಿಸಿ ಮನೆಗೆ ಬರುವುದನ್ನು ಮಗ ಬೀರೇಶ್ ವಿರೋಧಿ ಸುತ್ತಿದ್ದ. ಇದರಿಂದ ಸಿಟ್ಟಾದ ಲಕ್ಷ್ಮಪ್ಪ, ಪತ್ನಿ ಊರಿಗೆ ಹೋದ ಸಮಯದಲ್ಲಿ ಮಗನನ್ನು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 