ಫೆ. 3 ಇಂದು ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಗಾರ
Feb. 3 Workshop on guarantee schemes today
ಸವದತ್ತಿ 02 : ತಾಲೂಕಿನ ಯಕ್ಕುಂಡಿ, ಬಡ್ಲಿ, ಮಲ್ಲೂರು ಹಾಗೂ ಹೊಸೂರ ಗ್ರಾಮಗಳಲ್ಲಿ ಫೆ. 3 ಇಂದು ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಗಾರ ಆಯೋಜಿಸಲಾಗಿದ್ದು, ಫಲಾನುಭವಿಗಳಲ್ಲಿ ಸಮಸ್ಯೆಗಳಿದ್ದರೆ ಚರ್ಚಿಸಲು ಅವಕಾಶವಿದೆ. ಸ್ಥಳೀಯ ಮಟ್ಟದಲ್ಲೇ ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಳ್ಳಬಹುದಾಗಿದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸವದತ್ತಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮರ್ಕಗೊಳಿಸಲು ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಗಾರ ನಡೆಸಲಾಗುತ್ತಿದ್ದು, ಗ್ಯಾರಂಟಿ ಯೋಜನೆಗಳ ಉದ್ದೇಶ, ಅನುಷ್ಠಾನ ವಿಧಾನ ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವ ಪ್ರಯೋಜನಗಳ ಕುರಿತು ವಿವರವಾಗಿ ಮಾಹಿತಿ ನೀಡಲಾಗುವುದು. ಗ್ರಾ.ಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಫಲಾನುಭವಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 