ನೊಂದ ರೈತನಿಗೆ ರೈತ ಸಂಘದಿಂದ ಧನ ಸಹಾಯ
Financial assistance from farmers' association to distressed farmer
ಗದಗ 23 : ಇತ್ತೀಚಿಗೆ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಇಬ್ಬರು ಬಡ ರೈತರ 10 ಎಕರೆ ಜಮೀನಿನಲ್ಲಿ ಬೆಳೆದಂತಹ ಗೋವಿನ ಜೋಳಕ್ಕೆ ರಾತ್ರಿ ಸಮಯದಲ್ಲಿ ಟ್ರಾ-್ಯಕ್ಟರ್ ಮುಖಾಂತರ ದುಷ್ಕರ್ಮಿಗಳು ಬೆಳೆಯನ್ನು ಹಾಳು ಮಾಡಿರುವ ಕೃತ್ಯವನ್ನು ಖಂಡಿಸಿ ಹಾಗೂ ನೊಂದ ರೈತರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವ ಮೇಟಿ ಅವರ ಬಣದ ಮುಂಡರಗಿ ತಾಲೂಕಿನ ಮಹಿಳಾ ಅಧ್ಯಕ್ಷರಾದ ನಾಗವೇಣಿ ಕುಡುಪಲಿ ಹಾಗೂ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಿರೇಮಠ ಅವರು ಹಾರೂಗೇರಿ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯವನ್ನು ತುಂಬಿ ಸಂತಾಪವನ್ನು ವ್ಯಕ್ತಪಡಿಸಿ, ಮುಂಡರಗಿ ತಾಲೂಕು ಹಸಿರು ಸೇನೆ ವತಿಯಿಂದ ಧನಸಹಾಯವನ್ನು ಮಾಡಿದರು. ಈ ಸಂದರ್ಭದಲ್ಲಿ ಮುಂಡರಗಿ ತಾಲ್ಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 