ಆರ್ಥಿಕ ಸಾಕ್ಷರತಾ ವಾರದ ಆಚರಣೆ
ಲೋಕದರ್ಶನ ವರದಿ
ಸಿದ್ದಾಪುರ:ಆರ್ಥಿಕ ಸಾಕ್ಷರತಾ ವಾರದ ಆಚರಣೆ ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದೊಂದಿಗೆ ತಾಲೂಕಿನ ಮನಮನೆಯಲ್ಲಿ ನಡೆಯಿತು.
ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳಿಗೆ ಈ ಕುರಿತು ಮಾಹಿತಿ ನೀಡಲಾಯಿತು. ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರದ ಸಮಾಲೋಚಕರಾದ ಎ.ಶಬ್ಬೀರ್ ಅಹಮದ್ ಆರ್ಥಿಕ ಸಾಕ್ಷರತಾ ವಾರದ ಆಚರಣೆಯ ಕುರಿತು ಮಾಹಿತಿ ನೀಡಿ ಬ್ಯಾಂಕ್ ನಲ್ಲಿ ಜನಸಾಮಾನ್ಯರಿಗೆ ಕೂಲಿ ಕಾರ್ಮಿಕರಿಗೆ ಕೃಷಿಕರಿಗೆ ಸಿಗುವ ಸೌಲಭ್ಯಗಳು, ಫ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಸೇರಿದಂತೆ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಿರಿಯ ಸಮಾಲೊಚಕರಾದ ಶಿವಶಂಕರ ಎನ್ ಕೆ. ಮನಮನೆ ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ನಾಯ್ಕ, ಸಿದ್ದಾಪುರ ಸಿಂಡಿಕೇಟ್ ಬ್ಯಾಂಕ್ ನ ರೋಹಿತ್, ಬ್ಯಾಂಕ್ ಮಿತ್ರ ಲೂರ್ದಿಯಾ ಫರ್ನಾಡೀಸ್ , ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 