ಆರ್ಥಿಕ ಸಾಕ್ಷರತಾ ವಾರದ ಆಚರಣೆ
ಲೋಕದರ್ಶನ ವರದಿ
ಸಿದ್ದಾಪುರ:ಆರ್ಥಿಕ ಸಾಕ್ಷರತಾ ವಾರದ ಆಚರಣೆ ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದೊಂದಿಗೆ ತಾಲೂಕಿನ ಮನಮನೆಯಲ್ಲಿ ನಡೆಯಿತು.
ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳಿಗೆ ಈ ಕುರಿತು ಮಾಹಿತಿ ನೀಡಲಾಯಿತು. ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರದ ಸಮಾಲೋಚಕರಾದ ಎ.ಶಬ್ಬೀರ್ ಅಹಮದ್ ಆರ್ಥಿಕ ಸಾಕ್ಷರತಾ ವಾರದ ಆಚರಣೆಯ ಕುರಿತು ಮಾಹಿತಿ ನೀಡಿ ಬ್ಯಾಂಕ್ ನಲ್ಲಿ ಜನಸಾಮಾನ್ಯರಿಗೆ ಕೂಲಿ ಕಾರ್ಮಿಕರಿಗೆ ಕೃಷಿಕರಿಗೆ ಸಿಗುವ ಸೌಲಭ್ಯಗಳು, ಫ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಸೇರಿದಂತೆ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಿರಿಯ ಸಮಾಲೊಚಕರಾದ ಶಿವಶಂಕರ ಎನ್ ಕೆ. ಮನಮನೆ ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ನಾಯ್ಕ, ಸಿದ್ದಾಪುರ ಸಿಂಡಿಕೇಟ್ ಬ್ಯಾಂಕ್ ನ ರೋಹಿತ್, ಬ್ಯಾಂಕ್ ಮಿತ್ರ ಲೂರ್ದಿಯಾ ಫರ್ನಾಡೀಸ್ , ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 