ವಿದ್ಯುತ್ ಶಾರ್ಟ ಸಕರ್ಿಟ್ನಿಂದ ಬೆಂಕಿ: ಕಬ್ಬು ಬೆಳೆ ಕರಕಲು
ಬೈಲಹೊಂಗಲ 22: ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ ಸಕರ್ಿಟಗೊಂಡು ಕಬ್ಬಿನ ತೋಟಕ್ಕೆ ಬೆಂಕಿ ತಗುಲಿ ಅಂದಾಜು ರೂ. 2.5 ಲಕ್ಷ ಕಬ್ಬು ಸುಟ್ಟು ಕರಕಲಾದ ಘಟನೆ ಗುರುವಾರ ಜರುಗಿದೆ.
ಬೂದಿಹಾಳ ಗ್ರಾಮದ ಬಸಪ್ಪ ಕಲ್ಲಪ್ಪ ಮಡಿವಾಳರ ಅವರಿಗೆ ಸೇರಿದ ಸುಮಾರು 4 ಎಕರೆ ಕಬ್ಬಿನಲ್ಲಿ 3 ಎಕರೆ ಕಬ್ಬು ಸುಟ್ಟಿದೆ. 1 ಏಕರೆ ಕಬ್ಬು ಅರೆಬರೆ ಸುಟ್ಟಿದ್ದು ಬೆಂಕಿ ಜಳಕ್ಕೆ ಅಕ್ಕಪಕ್ಕದ ಜಮೀನಿನ ಅಲ್ಪಸ್ವಲ್ಪ ಹಾನಿಯಾಗಿದೆ.
ಜಮೀನಿನಲ್ಲಿ ಕಬ್ಬು ಬೆಳೆದು ಕಟಾವಿಗೆ ಬಂದಿತ್ತು. ಗುರುವಾರ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಬ್ಬು ಬೆಳೆ ನಾಶವಾಗಿದೆ. ಸುದ್ದಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಬೈಲಹೊಂಗಲ ಅಗ್ನಿಶಾಮಕ ದಳದ ಠಾಣಾಧಿಕಾರಿ ಮಂಜುನಾಥ ಕಲಾದಗಿ ಹಾಗೂ ಸಿಬ್ಬಂದಿ ವರ್ಗ ಧಾವಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ಯಾವುದೇ ಪ್ರಾಣಹಾನಿ ಆಗಿಲ್ಲವೆಂದು ತಿಳಿಸಿದ್ದಾರೆ.
ಪೊಟೊ ಕ್ಯಾಪ್ಸನ:ಎಚ್22-ಬಿಎಲ್ಎಚ್6 ಎ&ಬಿ
ಬೂದಿಹಾಳ ಗ್ರಾಮದಲ್ಲಿ ವಿದ್ಯುತ್ ಶಾರ್ಟ ಸಕರ್ಿಟಗೊಂಡು ಕಬ್ಬಿನ ತೋಟಕ್ಕೆ ಬೆಂಕಿ ತಗುಲಿರುವುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 