ಹಾಲು ಸಾಗಾಟ ವಾಹನಕ್ಕೆ ಬೆಂಕಿ: ಆಗ್ನಿ ಶಾಮಕದಳದಿಂದ ಬೆಂಕಿ ಶಮನ
Fire in milk transport vehicle: Firefighters douse the fire
ಕಾರವಾರ 08: ರಾಷ್ಟ್ರೀಯ ಹೆದ್ದಾರಿ 66 ರ ಲಂಡನ್ ಬ್ರಿಡ್ಜ್ ಬಳಿ ನಿಲ್ಲಿಸಿದ್ದ ಹಾಲಿನ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ನಡೆದಿದೆ. ಕಾರವಾರದ ಕೋಡಿಬಾಗ ಥಾಮ್ಸೆ ವಾಡದ ನಿವಾಸಿ ಸಂತೋಷಿ ಸತೀಶ್ ಚಿಪಕರ್ ಎಂಬುವವರಿಗೆ ಸೇರಿದ ಹಾಲು ಸಾಗಾಟ ವಾಹನ ಶುಕ್ರವಾರ ರಾತ್ರಿ ಪ್ಲೈ ಓವರ್ ಕೆಳಗೆ ನಿಲ್ಲಿಸಲಾಗಿತ್ತು. ಶನಿವಾರ ಬೆಳಗ್ಗೆ ಆಕಸ್ಮಿಕವಾಗಿ ವಾಹನದ ಎಂಜಿನ್ ನಲ್ಲಿ ಬೆಂಕಿ ತಗಲಿ ವಾಹನ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ವಾಹನದಲ್ಲಿ ಶಾರ್ಟ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರುವ ಸಾಧ್ಯತೆ ಇದೆ. ಒಂದು ಲಕ್ಷ ರೂ.ಗಳಿಗೂ ಹೆಚ್ಚು ಹಾನಿಯಾಗಿದ್ದು ಘಟನೆ ಸಂಬಂಧ ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 