ರಾಜ್ಯಮಟ್ಟದ ಐಎಸ್ಟಿಇ ಸ್ಪರ್ಧೆಗಳಲ್ಲಿ ಪ್ರಥಮ
First in state-level ISTE competitions
ಮಹಾಲಿಂಗಪುರ 03: ಬಾಗಲಕೋಟೆಯ ಬಿವಿವಿಎಸ್ ಪಾಲಿಟೆಕ್ನಿಕ್ನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯಮಟ್ಟದ 5ನೇ ಐಎಸ್ಟಿಇ ಸ್ಪರ್ಧೆಗಳಲ್ಲಿ ಮಹಾಲಿಂಗಪುರದ ಕೆಎಲ್ಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡಿದ್ದಾರೆ.
ಮೆಕ್ಯಾನಿಕಲ್ ವಿಭಾಗದ ಭಾವಿಕ್ ಓಸ್ವಾಲ್ ಪೇಪರ್ ಪ್ರೆಜೆಂಟೇಶನ್ನಲ್ಲಿ ಪ್ರಥಮ, ಇಲೆಕ್ಟ್ರಿಕಲ್ ವಿಭಾಗದ ಶಿವಾನಂದ ನಾಗನೂರ ಪೋಸ್ಟರ್ ಮೇಕಿಂಗ್ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರಿಗೆ ವಂದನಾ ಪಸಾರ, ಯು.ಡಿ.ಹಾದಿಮನಿ, ಸುಭಾಸ್ ಮೂಶಿ, ಲಕ್ಷ್ಮೀ ಅಂಗಡಿ, ಚೇತನ ಕುಂದರಗಿ, ಲಕ್ಷ್ಮೀ ಪಾಟೀಲ, ಮಂಜುನಾಥ ಅರಕೇರಿ, ವಿಶಾಲ ಮೆಟಗುಡ್ಡ ಮಾರ್ಗದರ್ಶನ ಮಾಡಿದ್ದರು.
ದೂರದ ಮಂಗಳೂರು, ಮೂಡಬಿದರೆ, ಬೆಂಗಳೂರು, ಗದಗ, ಹುಬ್ಬಳ್ಳಿ, ನಿಡಸೋಸಿ, ಬಾಗಲಕೋಟೆ, ಬೀಳಗಿ ಸೇರಿದಂತೆ 20 ಪಾಲಿಟೆಕ್ನಿಕ್ನಿಂದ 180 ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಅದರಲ್ಲಿ ಗ್ರಾಮೀಣ ಭಾಗದ ಮಹಾಲಿಂಗಪುರದ ಕೆಎಲ್ಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಾಧನೆ ಹೆಮ್ಮೆ ತಂದಿದೆ ಪ್ರಾಚಾರ್ಯ ಎಸ್.ಐ.ಕುಂದಗೋಳ ತಿಳಿಸಿದ್ದಾರೆ. ಮಹಾಲಿಂಗಪುರ ಕೆಎಲ್ಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಐಎಸ್ಟಿಇ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 